
ಲೋಕಸಭಾ ಚುನಾವಣೆಗೂ ಗಣಿನಾಡಲ್ಲಿ ಹೈವೋಲ್ಟೇಜ್ ಕದನ: ಶ್ರೀರಾಮು V/S ನಾಗೇಂದ್ರ ಫೈಟ್ ಪಕ್ಕನಾ..?
ಲೋಕಸಭಾ ಚುನಾವಣೆಗೆ ಮತ್ತೊಮ್ಮೆ ಶ್ರೀರಾಮುಲು ವಿರುದ್ಧ ನಾಗೇಂದ್ರ ನಿಲ್ಲಲಿದ್ದಾರೆ ಎಂದು ಹೇಳಲಾಗುತ್ತದೆ.
ಬಳ್ಳಾರಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ (BJP) ಮಣಿಸಲು ಕಾಂಗ್ರೆಸ್ (Congress) ಮತ್ತೆ ರಣತಂತ್ರ ಹೂಡುತ್ತಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ (Loksabha Election) 20ಕ್ಕಿಂತ ಹೆಚ್ಚು ಸೀಟ್ ಗೆಲ್ಲಲೇಬೇಕು ಎಂದು ನಿರ್ಧರಿಸಿರುವ ಕಾಂಗ್ರೆಸ್, ಬಳ್ಳಾರಿಯಲ್ಲಿ(bellary) ಗೆಲ್ಲಲು ಪ್ಲ್ಯಾನ್ ಮಾಡುತ್ತಿದೆ. ಬಿಜೆಪಿಯಿಂದ ಶ್ರೀರಾಮುಲು(Sriramulu) ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗ್ತಿದೆ. ಅವರ ವಿರುದ್ಧ ಸಚಿವ ನಾಗೇಂದ್ರ ನಿಲ್ಲಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಅಲ್ಲದೇ ಲೋಕಸಭೆಗೆ ನಾಲ್ಕರಿಂದ ಆರು ಹಾಲಿ ಸಚಿವರನ್ನೇ ಇಳಿಸಲು ಕಾಂಗ್ರೆಸ್ ಪ್ಲ್ಯಾನ್ ಮಾಡಿಕೊಂಡಿದೆ ಎಂದು ಹೇಳಲಾಗ್ತಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ವೀಕ್ಷಿಸಿ: ಜೆಡಿಎಸ್ ಮುಳುಗಿ ಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ: ಮಹಾಘಟಬಂಧನ್ ಸಭೆಗೆ ಹೆಚ್ಡಿಕೆ ಟಾಂಗ್