ನಾರಾಯಣ ಗೌಡ ಕಾರ್‌ ತಡೆದು ಜೆಡಿಎಸ್‌ ಕಾರ್ಯಕರ್ತರಿಂದ ಕಿರಿಕ್: ಹೆಚ್‌ಡಿಡಿ, ಹೆಚ್‌ಡಿಕೆ ಪರ ಘೋಷಣೆ

ಜೆಡಿಎಸ್‌ ಕಾರ್ಯಕರ್ತರು ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಕಾರು ತಡೆದು, ಕಿರಿಕ್‌ ಮಾಡಿದ್ದಾರೆ.

First Published May 4, 2023, 2:02 PM IST | Last Updated May 4, 2023, 2:02 PM IST

ಮಂಡ್ಯ: ಜಿಲ್ಲೆಯ ಕೆ.ಆರ್‌. ಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಜೆಡಿಎಸ್‌ ಕಾರ್ಯಕರ್ತರು ಕಿರಿಕ್‌ ಮಾಡಿದ್ದಾರೆ. ಅವರ ಕಾರನ್ನು ತಡೆದು, ಹೆಚ್‌.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರ ಪರ ಘೋಷಣೆ ಕೂಗಿದ್ದಾರೆ. ಕಾರನ್ನು ಅಡ್ಡಗಟ್ಟಿ ಕಿರಿಕ್‌ ಮಾಡಿದ ಕಾರ್ಯಕರ್ತರನ್ನು ಸಚಿವ ನಾರಾಯಣ ಗೌಡ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಬಳಿಕ ಮಧ್ಯಪ್ರವೇಶಿಸಿದ ಪೊಲೀಸರು ಕಾರ್ಯಕರ್ತರಿಗೆ ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಹಿಂದೂಗಳನ್ನು ತುಳಿಯುವ ಕೆಲಸ ಮಾಡ್ತಿದೆ: ಚಕ್ರವರ್ತಿ ಸೂಲಿಬೆಲೆ

Video Top Stories