News Hour: ಯುವನಿಧಿ ಹೆಸರಲ್ಲಿ ರಾಹುಲ್ ಗಾಂಧಿ ರಣಕಹಳೆ

ಕಾಂಗ್ರೆಸ್‌ನ ಯುವರಾಜ ರಾಹುಲ್‌ ಗಾಂಧಿ ಬೆಳಗಾವಿಯಲ್ಲಿ ಕಾಂಗ್ರೆಸ್‌ನ ನಾಲ್ಕನೇ ಗ್ಯಾರಂಟಿ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿ ಪದವೀಧರರಿಗೆ 3 ಸಾವಿರ, ಡಿಪ್ಲೋಮಾ ಮಾಡಿದವರಿಗೆ ಒಂದೂವರೆ ಸಾವಿರ ಭತ್ಯೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಮಾ.20): ಚುನಾವಣೆ ಸಮೀಪವಾಗುತ್ತಿರುವಂತೆ ಕಾಂಗ್ರೆಸ್‌ ಮತ್ತೊಂದು ಉಚಿತಾಸ್ತ್ರ ಘೋಷಣೆ ಮಾಡಿದೆ. ಯುವ ನಿಧಿ ಹೆಸರಲ್ಲಿ ಕಾಂಗ್ರೆಸ್‌ ಪಕ್ಷದ ನಾಲ್ಕನೇ ಗ್ಯಾರಂಟಿಯನ್ನು ರಾಹುಲ್‌ ಗಾಂಧಿ ಅನಾವರಣ ಮಾಡಿದರು. ಈ ವೇಳೆ ಎಂದಿನಂತೆ ರಾಜ್ಯ ಬಿಜೆಪಿ ಸರ್ಕಾರ ಹಾಗೂ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದರು.

ಆ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್‌, ಈ ಭೂಮಿಯಿಂದಲೇ ಬಿಜೆಪಿ ಭ್ರಷ್ಟ ಸರ್ಕಾರ ಓಡಿಸಬೇಕು. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಎಲ್ಲಾ ಜನರ ರಕ್ಷಣೆ ಮಾಡೋದು ನಮ್ಮ ನಿಮ್ಮೆಲ್ಲರ ಕರ್ತವ್ಯ ಈ ಸಮಾವೇಶದಲ್ಲಿದ್ದ ನಾಲ್ಕರಷ್ಟು ಜನರು ಹೊರಗೆ ನಿಂತಿದ್ದಾರೆ. ಯುವಕರಿಗೆ ರಕ್ಷಣೆ ನೀಡಲು ರಾಹುಲ್ ಗಾಂಧಿ ಬಂದಿದ್ದಾರೆ. ಯುವಕರಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಕಾಂಗ್ರಸ್ ಸಂಕಲ್ಪ ಎಂದು ಹೇಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಹುಲ್‌ ಗಾಂಧಿಯಿಂದ ಯುವಕರಿಗೆ 2 ಘೋಷಣೆ: ಸತೀಶ ಜಾರಕಿಹೊಳಿ

'ಬಿಜೆಪಿ ಪಾರ್ಟಿ ಕಿತ್ತೊಗೆಯಲು ನೀವೆಲ್ಲಾ ಶಪಥ ಮಾಡಬೇಕು. 18 ವರ್ಷದವರಿಗೆ ವೋಟ್ ಹಕ್ಕು ಕೊಟ್ಟಿದ್ದು ರಾಜೀವ್ ಗಾಂಧಿ. ಕಂಪ್ಯೂಟರ್ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದು ರಾಜೀವ್ ಗಾಂಧಿ. ನಮ್ಮದು ಡಬಲ್ ಎಂಜಿನ್ ಸರ್ಕಾರ ಅಂತಾರೆ 9 ವರ್ಷದಲ್ಲಿ ಮೋದಿ ಯುವಕರಿಗೆ ಏನ್ ಮಾಡಿದರು. ರಾಜ್ಯದಲ್ಲಿ ಪ್ರವಾಹ ಬಂದಾಗ ಮೋದಿ ಬರಲಿಲ್ಲ ಎಂದು ಸಿದ್ಧರಾಮಯ್ಯ ಟೀಕೆ ಮಾಡಿದರು.

Related Video