
ಶಾಸಕಾಂಗ ಸಭೆ ಅಲ್ಲ, ಡಿನ್ನರ್ ಪಾರ್ಟಿ.. ಏನಿದರ ಮರ್ಮ?
* ಮಹತ್ವದ ರಾಜಕಾರಣ ಬೆಳವಣಿಗೆ ಬಿಜೆಪಿ ಶಾಸಕಾಂಗ ಸಭೆ ರದ್ದು!?
* ಶಾಸಕಾಂಗ ಸಭೆ ಇಲ್ಲ.. ಸಿಎಂ ಜತೆ ಭೋಜನಕೂಟ..ಯಾವತ್ತು?
* ಸ್ವಾಮೀಜಿಗಳೊಂದಿಗೆ ಮಾತನಾಡಿದ ಸಿಎಂ
* ಕೈ-ಕಮಲ ಮತ್ತು ಲಿಂಗಾಯತ ವಾರ್
ಬೆಂಗಳೂರು( ಜು. 20) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಹೊರಕ್ಕೆ ಬಂದಿದ್ದ ಸಿಎಂ ಯಡಿಯೂರಪ್ಪ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗುವುದು ಎಂದಿದ್ದರು. ಆದರೆ ಈಗ ಪರಿಸ್ಥಿತಿ ಸಂಪೂರ್ಣ ಭಿನ್ನವಾಗಿದೆ.
Add Asianetnews Kannada as a Preferred Source

ಶಾಸಕಾಂಗ ಸಭೆ ರದ್ದಾಗಿದೆ ಎಂಬ ಮಾಹಿತಿಯ ಜತೆಗೆ ಸಿಎಂ ಬಿಎಸ್ ಯಡಿಯೂರಪ್ಪ ಭೋಜನ ಕೂಟ ಆಯೋಜನೆ ಮಾಡಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಕಲ್ಯಾಣ ಕರ್ನಾಟಕದ ಸ್ವಾಮೀಜಿಗಳು ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ಮಾಡಿದ್ದಾರೆ.