
Nikhil on Sumalatha: ನನ್ನ ವಿರುದ್ಧ ನಿಂತಿದ್ದ ಆ ತಾಯಿ ಗೆಲುವಿಗೆ ಕಾಂಗ್ರೆಸ್ ಕಾರಣ: ನಿಖಿಲ್ ಕುಮಾರಸ್ವಾಮಿ
ನನ್ನ ವಿರುದ್ಧ ನಿಂತಿದ್ದ ಆ ತಾಯಿಯ ಗೆಲುವಿಗೆ ಕಾಂಗ್ರೆಸ್ ಕಾರಣ ಎಂದು ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಸಂಸದೆ ಸುಮಲತಾ ಅವರನ್ನು ವಿಶ್ವಾಸಕ್ಕೆ ಪಡೆಯಲು ಜೆಡಿಎಸ್(JDS) ಮುಂದಾಗಿದೆ. ಅವರ ವಿಶ್ವಾಸವನ್ನು ಪಡೆಯುತ್ತೇವೆ ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಹೇಳಿದ್ದಾರೆ. 2019ರ ಸೋಲಿನ ನೋವು, ಭಾರ ಮನಸ್ಸಿನಲ್ಲಿ ಈಗಲೂ ಇದೆ. ನನ್ನ ವಿರುದ್ಧ ನಿಂತಿದ್ದ ಆ ತಾಯಿಯ ಗೆಲುವಿಗೆ ಕಾಂಗ್ರೆಸ್(Congress) ಕಾರಣ. ಈಗ ಆ ತಾಯಿ ಬಗ್ಗೆ ಮಾತನಾಡೋದು ಬೇಡ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲದೇ ನನ್ನ ಸೋಲಿಸಿದ್ದಾಗಿ ಸಿಎಂ ಭಾಷಣ ಮಾಡುತ್ತಾ ಹೇಳಿದ್ದಾರೆ ಎಂದು ಸಿದ್ದರಾಮಯ್ಯ(Siddaramaiah) ವಿರುದ್ಧ ನಿಖಿಲ್ ಕಿಡಿಕಾರಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ವೀಕ್ಷಿಸಿ: ಸುಮಲತಾ ನನ್ನ ಅಕ್ಕ ಇದ್ದಂತೆ, ಅವರ ಜೊತೆ ಸಂಘರ್ಷ ಮುಂದುವರೆಸಲ್ಲ: ಹೆಚ್ಡಿ ಕುಮಾರಸ್ವಾಮಿ