
ಪರಮೇಶ್ವರ್ ಮನೆಯಲ್ಲಿ ಡಿನ್ನರ್ ಮೀಟಿಂಗ್, ಕಾಂಗ್ರೆಸ್ ನಾಯಕರಿಗೆ ಡಿಕೆಶಿ ವಾರ್ನಿಂಗ್!
ಸರ್ಕಾರ ಬೀಳಿಸಲು ಆಪರೇಷನ್ ಕಮಲ ಷಡ್ಯಂತ್ರ, ಸಿದ್ದು ಆರೋಪ, ಸಿಎಂ ಬದಲಾವಣೆ ಕೂಗು ಬೆನ್ನಲ್ಲೇ ಡಿಕೆ ಶಿವಕುಮಾರ್ ವಾರ್ನಿಂಗ್, ಡಿಕೆಶಿ ಅನುಪಸ್ಥಿತಿಯಲ್ಲಿ ಡಿನ್ನರ್ ಮೀಟಿಂಗ್ ಸೇರಿದಂತೆ ಇಂದಿನ ಇಡಿ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
ಗೃಹ ಸಚಿವ ಪರಮೇಶ್ವರ ಮನೆಯಲ್ಲಿ ಡಿನ್ನರ್ ಭಾರಿ ಸಂಚಲನ ಸೃಷ್ಟಿಸಿದೆ. ಸಿಎಂ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ಸೇರಿದಂತೆ ಮೂವರು ಸಚಿವರ ಈ ಭೋಜನ ಜೊತೆ ಮಹತ್ವದ ಮೀಟಿಂಗ್ ನಡೆಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ಗೆ ಅನುಪಸ್ಥಿತಿಯಲ್ಲಿ ಈ ಸಭೆ ನಡೆದಿದೆ. ಇತ್ತ ಸಿಎಂ ಸಿದ್ದರಾಮಯ್ಯ ಅವಧಿ ಬಳಿಕ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ. ಸಿಎಂ ಬದಲಾವಣೆ ಖಚಿತ ಅನ್ನೋ ಹೆಳಿಕೆಗೆ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ. ಈ ರೀತಿ ಹೇಳಿಕೆ ಕೊಡದಂತೆ ವಾರ್ನಿಂಗ್ ನೀಡಿದ್ದಾರೆ.ಆದರೆ ಡಿಕೆಶಿ ವಾರ್ನಿಂಗ್ ಬಳಿಕವೂ ಹೇಳಿಕೆ ಮುಂದುವರಿದೆ.
Add Asianetnews Kannada as a Preferred Source
