Asianet Suvarna News Asianet Suvarna News

ಜು. 28ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ? ಏನು ವಿಶೇಷ....?

ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಸಾಧನ ಸಮಾವೇಶ ನಡೆಯಲಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ಸಾಧ್ಯತೆ ಇದೆ. ಅಲ್ಲದೇ ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಬೆಂಗಳೂರು, (ಜುಲೈ.19): ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿ ಮುಂದಿನ ವಾರ ಒಂದು ವರ್ಷ ಪೂರೈಸಲಿದ್ದಾರೆ. ಹಾಗೆಯೇ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿದೆ. ಬಿಜೆಪಿ ಸರ್ಕಾರದ ಸಾಧನೆಯನ್ನು ಜನರ ಮುಂದಿಡಲು ಇದೀಗ ಪಕ್ಷ ತಿರ್ಮಾನಿಸಿದೆ. 

News Hour: ಯುದ್ಧ ಘೋಷಣೆಗೂ ಮುನ್ನವೇ ಬಿಜೆಪಿ ತಾಲೀಮು: ಜುಲೈ 28ಕ್ಕೆ ಚಿಕ್ಕಬಳ್ಳಾಪುರದಲ್ಲಿ ಸಾಧನಾ ಸಮಾವೇಶ

ಈ ನಿಟ್ಟಿನಲ್ಲಿ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಸಾಧನ ಸಮಾವೇಶ ನಡೆಯಲಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ಸಾಧ್ಯತೆ ಇದೆ. ಅಲ್ಲದೇ ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

Video Top Stories