Asianet Suvarna News Asianet Suvarna News

ರಾಮ ಮಂದಿರ ಉದ್ಘಾಟನೆ ಮಾಡಲು ಮೋದಿ ಯಾರು? ಕೆರಳಿದ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್!

ಕರ್ನಾಟಕದಲ್ಲಿ ಗೋದ್ರಾ ಹತ್ಯಾಕಾಂಡ ರೀತಿಯ ದುರಂತಕ್ಕೆ ಸ್ಕೆಚ್-ಬಾಂಬ್ ಸಿಡಿಸಿದ ಬಿಕೆ ಹರಿಪ್ರಸಾದ್, ಬಿಕೆ ಹರಿಪ್ರಸಾದ್ ಗೋದ್ರಾ ಹೇಳಿಕೆಗೆ ಉತ್ತರಿಸಲು ಸಿಎಂ ಸಿದ್ದರಾಮಯ್ಯ ನಿರಾಕರಣೆ, ಹುಬ್ಬಳ್ಳಿಯ ಕರಸೇವಕನ ಬಂಧನ ವಿರೋಧಿಸಿ ಬಿಜೆಪಿ ಬೃಹತ್ ಪ್ರತಿಭಟನೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ರಾಮ ಮಂದಿರ ಉದ್ಘಾಟನೆಯನ್ನೇ ದೇಶಾದ್ಯಂತ ದೀಪಾವಳಿ ರೀತಿ ಆಚರಿಸಲು ಬಿಜೆಪಿ ತಯಾರಿ ಮಾಡಿಕೊಳ್ಳುತ್ತಿದೆ. ಇದು ಕಾಂಗ್ರೆಸ್ ಸೇರಿ ಕೆಲ ವಿಪಕ್ಷಗಳನ್ನು ಕೆರಳಿಸಿದೆ. ರಾಮ ಮಂದಿರದ ಲಾಭ ಬಿಜೆಪಿ ಪಡೆಯುತ್ತಿದೆ, ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಅನ್ನೋ ಆರೋಪದ ನಡುವೆ ಇಂದು ಬಿಕೆ ಹರಿಪ್ರಸಾದ್ ಹೊಸ ಬಾಂಬ್ ಸಿಡಿಸಿದ್ದಾರೆ. ಕೆಲ ಸಂಘಟನೆಗಳ ನಾಯಕರು ರಹಸ್ಯ ಸಭ ನಡೆಸಿ ಬಿಜೆಪಿ ನಾಯಕರಿಗೆ ಕೆಲ ಸೂಚನೆ ನೀಡಿದ್ದಾರೆ. ಈ ಮೂಲಕ ಗುಜರಾತ್‌ನ ಗೋದ್ರಾದಲ್ಲಿ ನಡೆದ ಹತ್ಯಾಕಾಂಡದ ರೀತಿಯಲ್ಲೇ ಕರ್ನಾಟಕದಲ್ಲಿ ಕರಸೇವಕರ ಹತ್ಯೆ ನಡೆಯಲಿದೆ ಎಂದು ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಹೊಸ ಬಾಂಬ್ ಸಿಡಿಸಿದ್ದಾರೆ. ಇದಕ್ಕೆ ಕೆಲ ಕಾಂಗ್ರೆಸ್ ನಾಯಕರು ಧನಿಗೂಡಿಸಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. 

Video Top Stories