ಮಂಡ್ಯದಲ್ಲಿ ಮೋದಿ ಮೇನಿಯಾ;ಜೆಡಿಎಸ್‌ ಕೋಟೆಯಲ್ಲಿ ಮೋದಿ ಮತಬೇಟೆ

ಪ್ರಧಾನಿ ನರೇಂದ್ರ ಮೋದಿಯವರ ಸ್ವಾಗತಕ್ಕೆ ಸಕ್ಕರೆ ಜಿಲ್ಲೆ ಮಂಡ್ಯ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. 

First Published Mar 12, 2023, 10:39 AM IST | Last Updated Mar 12, 2023, 10:39 AM IST

ಪ್ರಧಾನಿ ನರೇಂದ್ರ ಮೋದಿಯವರ ಸ್ವಾಗತಕ್ಕೆ ಸಕ್ಕರೆ ಜಿಲ್ಲೆ ಮಂಡ್ಯ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಮಂಡ್ಯದ ಹೃದಯ ಭಾಗದಲ್ಲಿ ಹಾದುಹೋಗಿರುವ ಬೆಂಗಳೂರು-ಮೈಸೂರು ಹೆದ್ದಾರಿ ಸಂಪೂರ್ಣ ಕೇಸರೀಮಯವಾಗಿದೆ. ಪ್ರವಾಸಿ ಮಂದಿರದ ಮುಂಭಾಗದಿಂದ ನಂದಾ ಚಿತ್ರಮಂದಿರದವರೆಗೆ ರೋಡ್‌ ಶೋ ನಡೆಸಲಿರುವ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಗೆ ದರ್ಶನ ನೀಡಲಿದ್ದಾರೆ. ಹೆದ್ದಾರಿ ಮೂಲಕ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಲೋಕಾರ್ಪಣೆ, ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಪ್ರಧಾನಿ . 

Video Top Stories