
ಚಿತ್ತಾಪುರದಲ್ಲಿ ಪೋಸ್ಟರ್ ಪಾಲಿಟಿಕ್ಸ್: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ವಾರ್ನಿಂಗ್
ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪೋಸ್ಟರ್ ಪಾಲಿಟಿಕ್ಸ್ ಶುರುವಾಗಿದ್ದು, ಬಿಜೆಪಿಯ ವಿರುದ್ಧ ಶಾಸಕ ಪ್ರಿಯಾಂಕ್ ಖರ್ಗೆ ವಾರ್ನಿಂಗ್ ನೀಡಿದ್ದಾರೆ.
ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆಂದು ಚಿತ್ತಾಪುರ ಕ್ಷೇತ್ರದಲ್ಲಿ ಬಿಜೆಪಿಯು ಪೋಸ್ಟರ್ ಅಂಟಿಸಿದ್ದು, ಬಿಜೆಪಿ ಪೋಸ್ಟರ್ ಪಾಲಿಟಿಕ್ಸ್ಗೆ ಪ್ರಿಯಾಂಕ್ ಖರ್ಗೆ ಕಿಡಿ ಕಾರಿದ್ದಾರೆ. ಪೋಸ್ಟರ್ ಅಂಟಿಸಿದ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ವಾರ್ನಿಂಗ್ ಮಾಡಿದ್ದು, ಕಾಂಗ್ರೆಸ್ ಕಾರ್ಯಕರ್ತರಿಗೆ ಕೆಣಕಿದರೆ ಸುಮ್ಮನೆ ಇರಲ್ಲ. ನಾನು ಮನಸ್ಸು ಮಾಡಿದರೆ ಒಬ್ಬ ಬಿಜೆಪಿ ಮುಖಂಡನು ಓಡಾಡಲು ಬಿಡಲ್ಲ ಎಂದು ವಾಡಿ ಪಟ್ಟಣದಲ್ಲಿ ವಾರ್ನಿಂಗ್ ಮಾಡಿದ್ದಾರೆ. ನನ್ನ ಮರ್ಯಾದೆ ಚೌಕಟ್ಟು ದಾಟಿ ಪಾಠ ಕಲಿಸುವೆ ಎಂದ ಶಾಸಕರು, ನನ್ನ ಕುಟುಂಬದ ಮೇಲೆ ವೈಯಕ್ತಿಕ ದಾಳಿ ಮಾಡಲಾಗುತ್ತಿದೆ. ಇದಕ್ಕೆ ಉತ್ತರ ಸಿಗಲಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
Add Asianetnews Kannada as a Preferred Source
