Asianet Suvarna News Asianet Suvarna News

ಸಿದ್ದರಾಮಯ್ಯನವರಿಗೆ ಈಗ ಪ್ರೀತಿ ಬಂದಿದೆ: ಪ್ರತಾಪ್ ಸಿಂಹ ಟಾಂಗ್

ದೇಗುಲ ತೆರವು ವಿಚಾರ ಮತ್ತೊಮ್ಮೆ ಸಾಕಷ್ಟು ಸದ್ದು ಮಾಡ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.

ಮೈಸೂರು, (ಸೆ.17): ದೇಗುಲ ತೆರವು ವಿಚಾರ ಈಗ ರಾಜಕೀಯ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದ್ದು,  ಮಾಜಿ ಸಿಎಂ ಸಿದ್ದರಾಮಯ್ಯ ಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.

ದೇಗುಲ ತೆರವು ವಿವಾದ: ರಾಜ್ಯದಲ್ಲಿ ಸರ್ಕಾರ ಯಾರದಿದೆ? ಸಿಂಹಗೆ ಸಿದ್ದು ಪ್ರಶ್ನೆ

 ನಿಮಗೆ ಈಗ ದೇಗುಲದ ಮೇಲೆ ಪ್ರೀತಿ ಕಾಳಜಿ ಬಂದಿದೆ. ನಿಮಗೆ ಪ್ರೀತಿ ಕಾಳಜಿ ಇದ್ದಿದ್ರೆ ವಿಗ್ರಹ ಕಳ್ಳ ಟಿಪ್ಪು ಜಯಂತಿ ಮಾಡ್ತಿರಲಿಲ್ಲ. ಲಿಂಗಾಯತರನ್ನು ಒಡೆಯುವ ಕೆಲಸ ಮಾಡುತ್ತಿರಲಿಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು.