
Narendra Modi: ನಾಳೆ ರಾಜ್ಯದಲ್ಲಿ 'ನಮೋ' ಮಿಂಚಿನ ಸಂಚಾರ: ಶಿವಮೊಗ್ಗ ಏರ್ಪೋರ್ಟ್ ಉದ್ಘಾಟನೆ
ನಾಳೆ ರಾಜ್ಯದ 2 ಜಿಲ್ಲೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮಿಂಚಿನ ಸಂಚಾರ ನಡೆಸಲಿದ್ದು, ಹತ್ತಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ನಾಳೆ ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ನಾಳೆ ಮೋದಿ ಶಿವಮೊಗ್ಗ ಏರ್ಪೋರ್ಟ್ ಉದ್ಘಾಟಿಸಲಿದ್ದು, ಬಿಎಸ್ವೈ ಹುಟ್ಟುಹಬ್ಬದಂದೇ ಏರ್ಪೋರ್ಟ್ ಲೋಕಾರ್ಪಣೆ ಆಗಲಿದೆ. ಬಿಎಸ್ವೈ ಅವರಿಗೆ ಪ್ರಧಾನಿ ಮೋದಿ ಮೆಚ್ಚುಗೆ ಮಾತು ಸಾಧ್ಯತೆ ಇದ್ದು, ಏರ್ಪೋರ್ಟ್ ಹೊರತುಪಡಿಸಿ ಹಲವು ಕಾಮಗಾರಿ ಹಾಗೂ ರೈಲು ಮಾರ್ಗದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ರಸ್ತೆ ಕಾಮಗಾರಿ ಉದ್ಘಾಟನೆ, ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಶಿವಮೊಗ್ಗ ಕೇಂದ್ರ ಡೈರಿ ಆವರಣದಲ್ಲಿ ನೂತನ ಕಟ್ಟಡ ಉದ್ಘಾಟನೆ ಹಾಗೂ ಎಪಿಎಂಸಿ ಆವರಣದಲ್ಲಿ ಆಡಳಿತ ಕಚೇರಿ ಉದ್ಘಾಟನೆ ಮಾಡಲಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ