Asianet Suvarna News Asianet Suvarna News

ಉರಿಯುವ ಬೆಂಕಿಗೆ ತುಪ್ಪ ಸುರಿದ ಪ್ರಿಯಾಂಕ ಗಾಂಧಿ ವಾದ್ರಾ

ಪಕ್ಷದ ನಾಯಕತ್ವ ಬದಲಾವಣೆ ವಿಚಾರವಾಗಿ ಕೆಲ ಕಾಂಗ್ರೆಸ್ ನಾಯಕರಯ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದೇ ತಡ ಭಿನ್ನಮತ ಸ್ಫೋಟಗೊಂಡಿದೆ.

ನವದೆಹಲಿ, (ಆ.24): ಪಕ್ಷದ ನಾಯಕತ್ವ ಬದಲಾವಣೆ ವಿಚಾರವಾಗಿ ಕೆಲ ಕಾಂಗ್ರೆಸ್ ನಾಯಕರಯ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದೇ ತಡ ಭಿನ್ನಮತ ಸ್ಫೋಟಗೊಂಡಿದೆ.

ರಾಹುಲ್ ಮಾತಿನಿಂದ ಭುಗಿಲೆದ್ದ ಆಕ್ರೋಶ: ರಾಜೀನಾಮೆಗೆ ಮುಂದಾದ ಹಿರಿಯ ನಾಯಕ

ಮತ್ತೊಂದೆಡೆ ರಾಹುಲ್ ಗಾಂಧಿ ಅವರು, ಪತ್ರ ಬರೆದ ನಾಯಕರಿಗೆ ಬಿಜೆಪಿ ನಂಟಿದೆ ಎನ್ನುವ ಆರೋಪ ಮಾಡಿದ್ದು, ಇದು ನಾಯಕ ಕಣ್ಣುಕೆಂಪಾಗಿಸಿದೆ. ಇನ್ನೊಂದೆಡೆ ಪ್ರಿಯಾಂಕ ಗಾಂಧಿ ವಾದ್ರಾ ಕೂಡ ಕಾಂಗ್ರೆಸ್ ಹಿರಿಯ ನಾಯಕನಿಗೆ ಟಾಂಗ್ ಕೊಟ್ಟಿದ್ದು, ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲವಾಗುತ್ತಿದೆ.