
ಲಿಂಗಾಯತ ಸಮುದಾಯ ಸೆಳೆಯಲು ಕಾಂಗ್ರೆಸ್ ಕಸರತ್ತು, ಮಠಗಳಿಗೆ ರಾಹುಲ್ ಭೇಟಿ
ರಾಜಕೀಯದಲ್ಲಿ ಪ್ರಾಬಲ್ಯ ಹೊಂದಿರುವ ಲಿಂಗಾಯತರನ್ನು ಸೆಳೆಯಲು ಕಾಂಗ್ರೆಸ್ ಸಿದ್ದತೆ ನಡೆಸುತ್ತಿದೆ. ಚುನಾವಣಾ ರಾಜಕೀಯದಿಂದ ಬಿಎಸ್ವೈ ಹಿಂದೆ ಸರಿದಿದ್ದಾರೆ. ಬಿಎಸ್ವೈ ಅನುಪಸ್ಥಿತಿಯಲ್ಲಿ ಲಿಂಗಾಯತರನ್ನು ಸೆಳೆಯಲು ಕಾಂಗ್ರೆಸ್ ತಂತ್ರ ರೂಪಿಸಿದೆ.
ಬೆಂಗಳೂರು (ಆ. 05): ರಾಜಕೀಯದಲ್ಲಿ ಪ್ರಾಬಲ್ಯ ಹೊಂದಿರುವ ಲಿಂಗಾಯತರನ್ನು ಸೆಳೆಯಲು ಕಾಂಗ್ರೆಸ್ ಸಿದ್ದತೆ ನಡೆಸುತ್ತಿದೆ. ಚುನಾವಣಾ ರಾಜಕೀಯದಿಂದ ಬಿಎಸ್ವೈ ಹಿಂದೆ ಸರಿದಿದ್ದಾರೆ. ಬಿಎಸ್ವೈ ಅನುಪಸ್ಥಿತಿಯಲ್ಲಿ ಲಿಂಗಾಯತರನ್ನು ಸೆಳೆಯಲು ಕಾಂಗ್ರೆಸ್ ತಂತ್ರ ರೂಪಿಸಿದೆ. ರಾಹುಲ್ ಗಾಂಧಿ ರಾಜ್ಯ ಪ್ರವಾಸದ ವೇಳೆ, ಮಠಗಳಿಗೆ ಭೇಟಿ ನೀಡಿ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಉದ್ದೇಶ. ರಾಹುಲ್ ಗಾಂಧಿ ಮುರುಘಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.
Add Asianetnews Kannada as a Preferred Source

ರಾಜ್ಯದ ಕರಾವಳಿ ಜಿಲ್ಲೆಗಳ ಪರಿಸ್ಥಿತಿ, ಅಲ್ಲಿ ಬಿಜೆಪಿ ವಿರುದ್ಧ ಜನ ಸಿಟ್ಟಿಗೆದ್ದಿರುವುದು ಮತ್ತು ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಈ ಬಗ್ಗೆ ಅಸಮಾಧಾನಗೊಂಡಿರುವ ಲಿಂಗಾಯತ ಸಮುದಾಯವನ್ನು ಪಕ್ಷದತ್ತ ಸೆಳೆಯುವ ದಿಸೆಯಲ್ಲಿ ಕಾರ್ಯತಂತ್ರ ರೂಪಿಸುವ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗಿದೆ.