
ರಾಯಚೂರು: ಮತಗಟ್ಟೆ ಬಳಿ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಗಲಾಟೆ
ರಾಜ್ಯಾದ್ಯಂತ ಮತದಾನ ನಡೆಯುತ್ತಿದ್ದರೆ ಇತ್ತ ರಾಯಚೂರಿನಲ್ಲಿ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ.
ರಾಜ್ಯಾದ್ಯಂತ ಮತದಾನ ನಡೆಯುತ್ತಿದ್ದರೆ ಇತ್ತ ರಾಯಚೂರಿನಲ್ಲಿ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ.ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ರಾಯಚೂರು ಜಿಲ್ಲೆ ಲಿಂಗಸೂಗೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಕಾರಿಗೆ ಬಿಜೆಪಿ ಬಾವುಟ ಹಾಕಿಕೊಂಡು ಬಂದ ಅಭ್ಯರ್ಥಿಯನ್ನು ನೋಡಿ ಕಾಂಗ್ರೆಸ್ ಮುಖಂಡರು ಗಲಾಟೆ ಮಾಡಿದ್ದಾರೆ. ಮಾನಪ್ಪ ವಜ್ಜಲ್,ಕೈ ಮುಖಂಡರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕಾರಿಗೆ ಬಿಜೆಪಿ ಬಾವುಟ ಹಾಕಿಕೊಂಡು ಬಂದಿರುವುದನ್ನು ಪ್ರಶ್ನಿಸಲಾಗಿದೆ.
Add Asianetnews Kannada as a Preferred Source
