ಬೆಳಗಾವಿ ಗ್ರಾಮೀಣ ಶಾಸಕಿ ವಿಚಾರಕ್ಕೆ ಇಡೀ ರಾಜ್ಯ ಹಾಳಾಗಿದೆ: ಹೆಬ್ಬಾಳ್ಕರ್ಗೆ ಜಾರಕಿಹೊಳಿ ಟಾಂಗ್
ನನ್ನ ಮತ್ತು ಡಿ.ಕೆ ಶಿವಕುಮಾರ್ ಸಂಬಂಧ ಹಾಳಾಗಲು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿಯೇ ಕಾರಣ ಎಂದು ರಮೇಶ್ ಜಾರಕಿಹೊಳಿ ಆರೋಪ ಮಾಡಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿಗೆ ಟಿಕೆಟ್ ಕೊಡುವುದು ಬೇಡ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದರು. ನಾನು ಒತ್ತಾಯ ಮಾಡಿ ಗ್ರಾಮೀಣ ಕ್ಷೇತ್ರದಲ್ಲಿ ಟಿಕೆಟ್ ಕೊಡಿಸಿದ್ದೆನು. ಆದರೆ, ನಮ್ಮಿಬ್ಬರ ಸಂಬಂಧ ಹಾಳಾಗಲು ಆ ಗ್ರಾಮೀಣ ಶಾಸಕಿಯೇ ಕಾರಣ ಆಗಿದ್ದಾಳೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಹೆಸರು ಹೇಳದೇ ರಮೇಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ. ಗ್ರಾಮೀಣ ಶಾಸಕಿ ವಿಚಾರಕ್ಕೆ ಇಡೀ ರಾಜ್ಯ ಹಾಳಾಗಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ರಮೆಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದರು.