Asianet Suvarna News Asianet Suvarna News

ಸಿ.ಡಿ.ಕೇಸ್: ಬೆಳಗಾವಿಯಲ್ಲಿ ಹೈಡ್ರಾಮಾ, ರಮೇಶ್ ಜಾರಕಿಹೊಳಿ ಬೆಂಬಲಿಗರ ಪುಂಡಾಟ

: ಡಿ. ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ಮಾಡಿದರು.

ಬೆಳಗಾವಿ, (ಮಾ.28): ಡಿ. ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ಮಾಡಿದರು.

ಸಿ.ಡಿ.ಕೇಸ್: ಕಾಂಗ್ರೆಸ್ ನಿಯೋಗದಿಂದ ಜಾರಕಿಹೊಳಿಗೆ ಬಿಗ್ ಶಾಕ್

ಭಾನುವಾರ ಮಧ್ಯಾಹ್ನ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಿ. ಕೆ. ಶಿವಕುಮಾರ್‌ಗೆ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಮತ್ತೊಂದೆಡೆ ವಿಮಾನ ನಿಲ್ದಾಣದ ಹೊರಗೆ ಅವರ ವಿರುದ್ಧ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಈ ವೇಳೆ ಚಪ್ಪಲಿ ತೂರಾಟ ನಡೆಸಿ ಪುಂಡಾಟ ಮೆರೆದರು.