Asianet Suvarna News Asianet Suvarna News

ಸಿದ್ದರಾಮಯ್ಯ ಆರೋಪಕ್ಕೆ ಯಾವ ತನಿಖೆಗೂ ಸಿದ್ಧ ಎಂದ ಮಾಜಿ ಶಿಷ್ಯ

ಕೋವಿಡ್ ಹೆಸರನಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ಯಾವ ತನಿಖೆಯನ್ನು ಬೇಕಾದರೂ ನಡೆಸಲಿ. ಅದಕ್ಕೆ ಸಿದ್ಧವೆಂದು  ಎಂದು  ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರು, (ಜುಲೈ.03): ಕೋವಿಡ್19 ಉಪಕರಣ ಖರೀದಿಯಲ್ಲಿ 2200 ಕೋಟಿ ಭ್ರಷ್ಟಾಚಾರ ನಡೆದಿದೆ ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

2200 ಕೋಟಿ ಭ್ರಷ್ಟಾಚಾರ: ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಸಿದ್ದರಾಮಯ್ಯ

ಇದಕ್ಕೆ ಪ್ರತಿಕ್ರಿಯಿಸಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಯಾವುದೇ ಭ್ರಷ್ಟಾಚಾರ ನಡೆದಿಲ್ಲ.  ಯಾವ ತನಿಖೆಯನ್ನು ಬೇಕಾದರೂ ನಡೆಸಲಿ. ಅದಕ್ಕೆ ಸಿದ್ಧವೆಂದು ತಿರುಗೇಟು ನೀಡಿದ್ದಾರೆ.