
ಒಳ ಮೀಸಲಾತಿ ವಿಚಾರ: ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದ ಸಿ.ಟಿ. ರವಿ
ಒಳ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ನಾಯಕ ಸಿ.ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚುನಾವಣೆ ಬಂದಾಗ ಕಾಂಗ್ರೆಸ್ ಒಡೆದು ಆಳುತ್ತೆ ಎಂದು ಸಿ.ಟಿ ರವಿ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ಯಾಕೆ ಮೀಸಲಾತಿ ಜಾರಿಗೆ ತರಲಿಲ್ಲ, ಯಾಕೆ ಮೀಸಲಾತಿ ಕೊಡಲಿಲ್ಲ ಅನ್ನುವುದಕ್ಕೆ ಉತ್ತರ ಕೊಡಲಿ. ಇದಕ್ಕೆ ಡಿಕೆಶಿ ಹಾಗೂ ಸಿದ್ದರಾಮಯ್ಯ ಏನು ಉತ್ತರ ಕೊಡಲ್ಲ, ಒಡೆದು ಆಳೋದೇ ಭಾರತ್ ಜೋಡೋ ಮಾಡೆಲ್ ಎಂದು ಕಾಂಗ್ರೆಸ್ ವಿರುದ್ಧ ಅವರು ವಾಗ್ಧಾಳಿ ನಡೆಸಿದರು.
Add Asianetnews Kannada as a Preferred Source

Udupi: ಆದ್ಯತೆ ಕೊಟ್ಟು ರೈತರ ಕೆಲಸ ಮಾಡಿ ಅಧಿಕಾರಿಗಳಿಗೆ ಸುನಿಲ್ ಕುಮಾರ್ ಕಿವಿಮಾತು