Asianet Suvarna News Asianet Suvarna News

ಪೊಲೀಸರ ಕೇಸರಿ ದಿರಿಸು: ಸಿದ್ದರಾಮಯ್ಯ ವಿರುದ್ಧ ಸಚಿವ ಸುನೀಲ್ ಕುಮಾರ್ ಕೆಂಡಾಮಂಡಲ

ಪೊಲೀಸರು ಕೇಸರಿ ದಿರಿಸಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ಷೇಪಕ್ಕೆ ಇಂಧನ ಸಚಿವ ಸುನೀಲ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
 

ಬೆಂಗಳೂರು, (ಅ.19): ಪೊಲೀಸರು ಕೇಸರಿ ದಿರಿಸಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ಷೇಪಕ್ಕೆ ಇಂಧನ ಸಚಿವ ಸುನೀಲ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ವಿವಾದ ಸೃಷ್ಟಿಸಿದ ಖಾಕಿ ಪಡೆಯ ಕೇಸರಿ ದಿರಿಸಿನ ಫೋಟೋ: ಸ್ಪಷ್ಟನೆ ಕೊಟ್ಟ ಗೃಹ ಸಚಿವ

ಇಂದು (ಅ.19) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುನೀಲ್ ಕುಮಾರ್,  ಕೇಸರಿ ಬಗ್ಗೆ ಯಾಕೆ ಜಿಗುಪ್ಸೆ? ಕೇಸರಿ ತ್ಯಾಗದ ಸಂಕೇತವಾಗಿದೆ. ಆದರೆ ಕೇಸರಿಯನ್ನು ಕಂಡರೆ ಯಾಕೆ ವಿಚಲಿತರಾಗಿದ್ದೀರಿ, ಗೊಂದಲಕ್ಕೆ ಒಳಗಾಗುತ್ತಿದ್ದೀರಿ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
 

Video Top Stories