Asianet Suvarna News Asianet Suvarna News

Satish Jarakiholi: ಡೈರೆಕ್ಟರ್, ಪ್ರೊಡ್ಯೂಸರ್ ಫೇಲ್ ಆದ್ರೆ ಈ ರೀತಿಯ ಫಲಿತಾಂಶ ನಿರೀಕ್ಷಿತ: ಸತೀಶ್ ಜಾರಕಿಹೊಳಿ

ನಮ್ಮ ನಾಯಕರು ಹಲವು ಕ್ಷೇತ್ರಗಳನ್ನು ನಿರ್ಲಕ್ಷಿಸಿದ್ದೂ ನಮ್ಮ ಹಿನ್ನಡೆಗೆ ಕಾರಣ ಎಂದು ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ಹೊರಹಾಕಿದ್ದಾರೆ.
 

ಬೆಳಗಾವಿ: ಡಬಲ್ ಡಿಜಿಟ್ ರೀಚ್ ಆಗದಿರುವುದಕ್ಕೆ ನಮ್ಮ ನಾಯಕರ ಓವರ್ ಕಾನ್ಫಿಡೆನ್ಸ್ ಕಾರಣ ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆಶಿ(DK Shivakumar) ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ(Satish Jarakiholi) ಪರೋಕ್ಷ ಅಸಮಾಧಾನ ಹೊರಹಾಕಿದ್ದಾರೆ. ಗೋಕಾಕ ನಗರದಲ್ಲಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ, ಡೈರೆಕ್ಟರ್, ಪ್ರೊಡ್ಯೂಸರ್ ಫೇಲ್ ಆದರೆ ಈ ರೀತಿಯ ಫಲಿತಾಂಶ ನಿರೀಕ್ಷಿತ. ಚುನಾವಣೆಗೆ(Lok Sabha elections) ಸಮಯ ಕಡಿಮೆ ಇರುತ್ತದೆ, ಆ ಸಮಯದಲ್ಲಿ ಅಲರ್ಟ್ ಇರಬೇಕು. ಇಲ್ಲವಾದರೆ ಚುನಾವಣೆ ಬಂದು ಹೋಗುತ್ತದೆ, ಆಗಲೇ ನಾವು ಕೆಲಸ ಮಾಡಬೇಕು. ನಮ್ಮ ನಾಯಕರು ಹಲವು ಕ್ಷೇತ್ರಗಳನ್ನು ನಿರ್ಲಕ್ಷಿಸಿದ್ದೂ ನಮ್ಮ ಹಿನ್ನಡೆಗೆ ಕಾರಣ. ಗೆಲ್ಲುವ ವಿಶ್ವಾಸದ ಕಾರಣಕ್ಕೆ ಇನ್ನೂ ಹಲವು ಕ್ಷೇತ್ರಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಚಾರ ಆಗಲಿಲ್ಲ. ಕೆಲವಡೆ ಕಡಿಮೆ ಮತಗಳ ಅಂತರದಿಂದ ಸೋಲಲು ನಮ್ಮ ನಿರ್ಲಕ್ಷ್ಯ ಕಾರಣ ಎಂದು ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Narendra Modi: ಬಹುಮತ ಪಡೆಯದ ಬಿಜೆಪಿ, ಎಡವಟ್ಟಾಗಿದ್ದೆಲ್ಲಿ..? ಕಮಲಾಧಿಪತಿಗಳ ಕಣ್ಣಿಗೆ ಕಾಣಲಿಲ್ವಾ ಆ ವಿಚಿತ್ರ ಲೆಕ್ಕಾಚಾರ..?