ಹಿಜಾಬ್ ನಿಷೇಧ ವಾಪಸ್ ಪಡೆದರೆ ಕೇಸರಿ ಶಾಲು ಎಚ್ಚರಿಕೆ, ಯೂಟರ್ನ್ ಹೊಡೆದ ಸಿಎಂ ಸಿದ್ದರಾಮಯ್ಯ!
ಕಾಂಗ್ರೆಸ್ ಮುಸ್ಲಿಂ ಪಾರ್ಟಿಯಾಗಿದೆ, ಮತ, ಒಲೈಕೆಯೇ ಅಜೆಂಡಾ ಎಂದ ಚಕ್ರವರ್ತಿ ಸೂಲಿಬೆಲೆ, ಹಿಜಾಬ್ ನಿಷೇಧ ವಾಪಸ್ ಹೇಳಿಕೆಗೆ ಪ್ರತಿಭಟನೆ, ಯೂಟರ್ನ್ ಹೊಡೆದ ಸಿದ್ದರಾಮಯ್ಯ, ಸೈನಿಕರ ಮೇಲಿನ ಪೂಂಚ್ ದಾಳಿ ಸಂಭ್ರಮಿಸಿದ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
ಕರ್ನಾಟಕದಲ್ಲಿ ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭಾಷಣದ ವೇಳೆ ಘೋಷಿಸಿದ್ದರು. ಈ ಹೇಳಿಕೆ ಕರ್ನಾಟಕ ಮಾತ್ರವಲ್ಲ ದೇಶದಲ್ಲಿ ಭಾರಿ ವಿರೋಧಕ್ಕೆ ಕಾರಣವಾಗಿದೆ. ಮುಗಿದು ಹೋಗಿದ್ದ ಹಿಜಾಬ್ ಗಲಾಟೆ ಮತ್ತೆ ಕೆದಕಿದ ಸಿದ್ದರಾಮಯ್ಯ, ಪ್ರತಿಭಟನೆ ಬಿಸಿ ಎದುರಿಸಿದ್ದಾರೆ. ಇದರ ಬೆನ್ನಲ್ಲೇ ಕೆಲ ವಿದ್ಯಾರ್ಥಿ ಸಂಘಟನೆಗಳು ಹಿಜಾಬ್ ನಿಷೇಧ ವಾಪಸ್ ಪಡೆದರೆ ಕೇಸರಿ ಶಾಲು ಹಾಕಿ ತರಗತಿಗೆ ಆಗಮಿಸುವುದಾಗಿ ಎಚ್ಚರಿಕೆ ನೀಡಿದೆ. ಈ ಎಲ್ಲಾ ಬೆಳವಣಿಗೆಯಿಂದ ಸಿಎಂ ಸಿದ್ದರಾಮಯ್ಯ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಹಿಜಾಬ್ ಕುರಿತು ಸರ್ಕಾರ ಯೋಚಿಸಿ ನಿರ್ಧಾರ ತೆಗೆದುಕೊಳ್ಳಲಿದೆ. ವಾಪಸ್ ಪಡೆಯುವ ನಿರ್ಧಾರ ಮಾಡಿಲ್ಲ ಎಂದಿದ್ದಾರೆ.