Asianet Suvarna News Asianet Suvarna News

ಯಾವ ಪಶ್ಚತ್ತಾಪ ಹೇಳಿಕೆ ನಾನು ಕೊಟ್ಟಿಲ್ಲ, ಸ್ವಾಮೀಜಿ ಹೇಳಿಕೆ ಬಗ್ಗೆ ಗೊತ್ತಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಬಾಳೆಹೊನ್ನೂರಿನ ರಂಭಾಪುರಿ ಮಠಕ್ಕೆ ಚೊಚ್ಚಲ ಭೇಟಿ ನೀಡಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸ್ವಾಮಿಗಳ ಸಮ್ಮುಖದಲ್ಲಿ ಲಿಂಗಾಯತ – ವೀರಶೈವ ಧರ್ಮ ಒಡೆದ ಆರೋಪದ ಬಗ್ಗೆ ಮಾತನಾಡುತ್ತಾ ಪಶ್ಚಾತಾಪ, ವಿಶಾದ ವ್ಯಕ್ತಪಡಿಸಿದ್ದರು. ಆದರೆ ಮರುಗಳಿಗೆಯಲ್ಲೇ ಮಠದಿಂದ ಹೊರಬಂದು ಯೂ ಟರ್ನ್​ ಹೊಡೆದ ಸಿದ್ದರಾಮಯ್ಯ ನಾನು ಪಶ್ಚಾತಾಪ ವ್ಯಕ್ತಪಡಿಸಿಲ್ಲ, ಪ್ರಸ್ತಾಪ ಮಾಡಿದ್ದೆ ಅಷ್ಟೇ ಎಂದಿದ್ದರು.

First Published Aug 20, 2022, 5:15 PM IST | Last Updated Aug 20, 2022, 5:15 PM IST

ನಿನ್ನೆ (ಆಗಸ್ಟ್​ 19) ಬಾಳೆಹೊನ್ನೂರಿನ ರಂಭಾಪುರಿ ಮಠಕ್ಕೆ ಚೊಚ್ಚಲ ಭೇಟಿ ನೀಡಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸ್ವಾಮಿಗಳ ಸಮ್ಮುಖದಲ್ಲಿ ಲಿಂಗಾಯತ – ವೀರಶೈವ ಧರ್ಮ ಒಡೆದ ಆರೋಪದ ಬಗ್ಗೆ ಮಾತನಾಡುತ್ತಾ ಪಶ್ಚಾತಾಪ, ವಿಶಾದ ವ್ಯಕ್ತಪಡಿಸಿದ್ದರು. ಆದರೆ ಮರುಗಳಿಗೆಯಲ್ಲೇ ಮಠದಿಂದ ಹೊರಬಂದು ಯೂ ಟರ್ನ್​ ಹೊಡೆದ ಸಿದ್ದರಾಮಯ್ಯ ನಾನು ಪಶ್ಚಾತಾಪ ವ್ಯಕ್ತಪಡಿಸಿಲ್ಲ, ಪ್ರಸ್ತಾಪ ಮಾಡಿದ್ದೆ ಅಷ್ಟೇ ಎಂದಿದ್ದರು.

ಈ ವಿಚಾರವಾಗಿ ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯವಾಡಿದ್ದು, ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದೆ. ಇನ್ನು ಈ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ ಕೊಟ್ಟಿದ್ದಾರೆ.