Asianet Suvarna News Asianet Suvarna News

ಅಸ್ತಿತ್ವಕ್ಕೆ ಬಂತು ಸಿದ್ದು-ಡಿಕೆಶಿ ಸರ್ಕಾರ: ಲೋಕಸಭೆ ಮೇಲೆ ಏನು ಪರಿಣಾಮ ಬೀರಲಿದೆ ಈ ಫಲಿತಾಂಶ?

ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಇದು ಸೋಲನ್ನೇ ಕಾಣುತ್ತಿದ್ದ ಕಾಂಗ್ರೆಸ್‌ ಪಾಲಿಗೆ ವರವಾಗಿದೆ.

ರಾಜ್ಯದಲ್ಲಿ ಸದೃಢ ಸರ್ಕಾರ ರಚನೆಯಾಗಿದೆ. ಈ ಸರ್ಕಾರದ ಸಾರತ್ಯವಹಿಸಿರುವುದು ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌. ಕೊನೆಗೂ ಕಾಂಗ್ರೆಸ್‌ ಪಾಲಿಗೆ ಈ ಭಲೇ ಜೋಡಿ ವರವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದಿರುವುದರಿಂದ, ಪಕ್ಷಕ್ಕೆ ಹೊಸ ಉಸಿರು ಸಿಕ್ಕತಾಂಗಿದೆ. ಇನ್ನೂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಜೋಡಿ, ಮೋದಿ- ಅಮಿತ್‌ ಶಾ ಜೋಡಿಗೆ ಸವಾಲಾಗುತ್ತಾ ಎಂಬ ಪ್ರಶ್ನೆ ಇದೀಗ ಮೂಡಿದೆ. ಅಲ್ಲದೇ ಕಾಂಗ್ರೆಸ್‌ ಮೋದಿ- ಶಾ ವ್ಯೂಹ ಬೇಧಿಸಲು ಸಹ ಸನ್ನದ್ಧವಾಗಿದೆ ಎನ್ನಲಾಗ್ತಿದೆ. ಒಟ್ಟಿನಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಕಾಂಗ್ರೆಸ್‌ಗೆ ಈ ಚುನಾವಣೆ ವರವಾಗಿರುವುದಂತೂ ಸತ್ಯ.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಕೊಟ್ಟ 5 ಗ್ಯಾರಂಟಿಗಳು ಈಡೇರುತ್ತಾ ?: ಈ ಬಗ್ಗೆ ಆರ್ಥಿಕ ತಜ್ಞರು ಹೇಳೋದೇನು ?, ಬೇಕಿರುವ ಹಣವೆಷ್ಟು ?

Video Top Stories