Asianet Suvarna News Asianet Suvarna News

Congress Padayatre ಪಾದಯಾತ್ರೆ ಬಿಟ್ಟು ಮತ್ತೆ ಬೆಂಗ್ಳೂರಿಗೆ ವಾಪಸ್, ಕಾರಣ ಕೊಟ್ಟ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಕೆದಾಟು ಪಾದಯಾತ್ರೆಯಿಂದ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ರಾಮನಗರ, (ಜ.12): ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಕೆದಾಟು ಪಾದಯಾತ್ರೆಯಿಂದ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

Mekedatu Padaytre: ಪಾದಯಾತ್ರೆ ವೇಳೆ ಸುಸ್ತು, ಕಾರನ್ನೇರಿದ ಸಿದ್ದರಾಮಯ್ಯ

ಇಂದು(ಬುಧವಾರ) 7 ಕಿ.ಮೀ ಪಾದಯಾತ್ರೆಯಿಂದ ಬಳಲಿರುವ ಸಿದ್ದರಾಮಯ್ಯಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಹೀಗಾಗಿ ರಾಮನಗರದ ಕಾಂಗ್ರೆಸ್ ನಾಯಕರೊಬ್ಬರ ಮನೆಗೆ ವಿಶ್ರಾಂತಿಗೆ ತರಳಿದ್ದಾರೆ. ನಂತರ ತೀವ್ರ ಬ್ಯಾಕ್ ಪೈನ್ ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಾಪಾಸ್ ಹೊರಟಿದ್ದಾರೆ.

Video Top Stories