
ಇನ್ನೂ ಬೇಕಾ? ಸಹವಾಸ ಸಾಕೆಂದ ಸಿದ್ದುಗೆ ಎಚ್ಡಿಕೆ ಫುಲ್ ಕ್ಲಾಸ್!
ಒಂದು ಕಾಲದಲ್ಲಿ ದೋಸ್ತಿಗಳಾಗಿದ್ದ ಎಚ್.ಡಿ.ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಮತ್ತೆ ಮಾತಿನ ಸಮರ ಆರಂಭಿಸಿದ್ದಾರೆ. ಜೆಡಿಎಸ್ ಸಹವಾಸ ಸಾಕು ಎಂದು ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಎಚ್ಡಿಕೆ ತಿರುಗೇಟು ನೀಡಿದ್ದಾರೆ.
ಬೆಂಗಳೂರು (ಅ.25): ಒಂದು ಕಾಲದಲ್ಲಿ ದೋಸ್ತಿಗಳಾಗಿದ್ದ ಎಚ್.ಡಿ.ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಮತ್ತೆ ಮಾತಿನ ಸಮರ ಆರಂಭಿಸಿದ್ದಾರೆ. ಜೆಡಿಎಸ್ ಸಹವಾಸ ಸಾಕು ಎಂದು ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಎಚ್ಡಿಕೆ ತಿರುಗೇಟು ನೀಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಸರ್ಕಾರ ರಚಿಸಿದ್ದವು. ಒಂದು ವರ್ಷದ ಬಳಿಕ ಮೈತ್ರಿ ಸರ್ಕಾರದ 17 ಶಾಸಕರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರ ಪತನವಾಗಿತ್ತು.