Asianet Suvarna News Asianet Suvarna News

ರಾಜ್ಯ ಪ್ರವಾಸದಲ್ಲಿರುವ ಅಮಿತ್ ಶಾಗೆ ಸರಣಿ ಪ್ರಶ್ನೆಗಳ ಬಾಣ ಬಿಟ್ಟ ಸಿದ್ದು

ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಗಿಬಿದ್ದಿದ್ದಾರೆ.

ಬೆಂಗಳೂರು, (ಜ.18): ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಗಿಬಿದ್ದಿದ್ದಾರೆ.

2 ಲಕ್ಷ ಮಕ್ಕಳಿಂದ ಶ್ಲೋಕಗಳ ಪಠಣ, ಅಮಿತ್‌ ಶಾ, ಬಿಎಸ್‌ವೈ ಭಾಗಿ! 

ಇಂದು (ಶನಿವಾರ) ಸಂಜೆ ಹುಬ್ಬಳ್ಳಿಯಲ್ಲಿರ ನಡೆಯಲಿರುವ ಪೌರತ್ವ ತಿದ್ದುಪಡಿ ಕಾಯ್ದೆ ಜಾಗೃತಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಹಾಗಾಗಿ ಶಾ ಬೆಂಗಳೂರಿಗೆ ಬಂದಿದ್ದು, ಇಲ್ಲಿಂದ ಹುಬ್ಬಳ್ಳಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಮತ್ತೊಂದೆಡೆ ಸಿದ್ದರಾಮಯ್ಯ ಅವರು ಅಮಿತ್ ಶಾ ಮೇಲೆ ಮುಗಿಬಿದ್ದಿದ್ದು, ಟ್ವಿಟ್ಟರ್‌ನಲ್ಲಿ ಸರಣಿ ಪ್ರಶ್ನೆಗಳನ್ನು ಹಾಕಿದ್ದಾರೆ.

ಜನವರಿ 18ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video Top Stories