Asianet Suvarna News Asianet Suvarna News

ಅತ್ತ ದೆಹಲಿಯಲ್ಲಿ ಡಿಕೆಶಿ ಬ್ಯಾಟಿಂಗ್: ಇತ್ತ ಬೆಂಗ್ಳೂರಲ್ಲಿ ಸಿದ್ದು ಬಣ ಮೀಟಿಂಗ್

 ಡಿಕೆಶಿ ದೆಹಲಿಗೆ ತೆರಳಿದ್ದು, ಕೆಪಿಸಿಸಿಗೆ ಎದುರಾಗಿರುವ ಗೊಂದಲಗಳ ನಿವಾರಣೆಗೆ ಕಸರತ್ತು ನಡೆಸಿದ್ದಾರೆ. ಆದ್ರೆ, ಇತ್ತ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ತಂಡದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ.
 

ಬೆಂಗಳೂರು,(ಜ.24): ಕೆಪಿಸಿಸಿ ಅಧ್ಯಕ್ಷ ಆಯ್ಕೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಶುರುವಾಗಿದೆ. ಒಂದು ಕಡೆ ಮೂಲ ಕಾಂಗ್ರೆಸ್ಸಿಗರು ಡಿಕೆಶಿ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ.

ಕೆಪಿಸಿಸಿ ಅಧ್ಯಕ್ಷ ಹುದ್ದೆ: ವೇಣುಗೋಪಾಲ್ ಭೇಟಿ ಬಳಿಕ ಡಿಕೆಶಿ ಫಸ್ಟ್ ರಿಯಾಕ್ಷನ್

ಇತ್ತೀಚೆಗೆ ದೆಹಲಿಯಲ್ಲಿ ಸಿದ್ದರಾಮಯ್ಯನವರು ಹೈಕಾಂಡ್‌ಗೆ ಮುಂದೆ ತಮ್ಮ ಆಪ್ತರ ಪರ ಅಭಿಪ್ರಾಯ ತಿಳಿಸಿ ಬಂದಿದ್ದರು. ಇದೀಗ ಸ್ವತಃ ಡಿಕೆಶಿ ದೆಹಲಿಗೆ ತೆರಳಿದ್ದು, ಕೆಪಿಸಿಸಿಗೆ ಎದುರಾಗಿರುವ ಗೊಂದಲಗಳ ನಿವಾರಣೆಗೆ ಕಸರತ್ತು ನಡೆಸಿದ್ದಾರೆ. ಆದ್ರೆ, ಇತ್ತ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ತಂಡದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ.