ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ತಾರೆ: ಮನೆಗೆ ಬಂದು ಭವಿಷ್ಯ ಹೇಳಿದ ಗೊರವಯ್ಯನವರು
ಸಿದ್ದರಾಮಯ್ಯನವರು ಮುಂದೆ ಬಾದಾಮಿಯಿಂದ ಚುನಾವಣೆಗೆ ನಿಂತು ಗೆಲ್ಲುತ್ತಾರೆ. ಸಿದ್ದರಾಮಯ್ಯ ಮುಂದೆ ಮುಖ್ಯಮಂತ್ರಿ ಆಗ್ತಾರೆ ಎಂದು ಮೈಲಾರ ಲಿಂಗೇಶ್ವರದ ಮೂವರು ಗೊರವಯ್ಯನವರು ಭವಿಷ್ಯ ನುಡಿದಿದ್ದಾರೆ.
ಬೆಂಗಳೂರು, (ಜು.16): ಕಾಂಗ್ರೆಸ್ನಲ್ಲಿ ಮುಂದಿನ ಮುಖ್ಯಮಂತ್ರಿ ಕುರಿತಂತೆ ಪಕ್ಷದಲ್ಲಿ ಮುಸುಕಿನ ಗುದ್ದಾಟಗಳು ಶುರುವಾಗಿವೆ. ಅದರಲ್ಲೂ ದಲಿತ ಸಿಎಂ ಕೂಗು ಕೇಳಿಬಂದಿದೆ.
ಮುಂದಿನ ಚುನಾವಣೆಗೆ ಸ್ಪರ್ಧಿಸುವ ಕ್ಷೇತ್ರವನ್ನು ಪ್ರಕಟಿಸಿದ ಸಿದ್ದರಾಮಯ್ಯ
ಇದರ ಮಧ್ಯೆ ಇದೀಗ ಸಿದ್ದರಾಮಯ್ಯನವರು ಮುಂದೆ ಬಾದಾಮಿಯಿಂದ ಚುನಾವಣೆಗೆ ನಿಂತು ಗೆಲ್ಲುತ್ತಾರೆ. ಸಿದ್ದರಾಮಯ್ಯ ಮುಂದೆ ಮುಖ್ಯಮಂತ್ರಿ ಆಗ್ತಾರೆ ಎಂದು ಮೈಲಾರ ಲಿಂಗೇಶ್ವರದ ಮೂವರು ಗೊರವಯ್ಯನವರು ಭವಿಷ್ಯ ನುಡಿದಿದ್ದಾರೆ.