ಶಿರಬಾಗಿ ನಮಸ್ಕರಿಸಿ ಬಸ್‌ ಹತ್ತಿದ ಅಜ್ಜಿ: ಬಹುಕಾಲ ನೆನಪಿನಲ್ಲಿ ಉಳಿಯುವಂತ ಫೋಟೋ ಎಂದ ಸಿಎಂ

ಧಾರವಾಡದಲ್ಲಿ ಅಜ್ಜಿಯೊಬ್ಬರು ಬಸ್‌ಗೆ ಶಿರಬಾಗಿ ನಮಸ್ಕರಿಸಿರುವ ಫೋಟೋವನ್ನು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.
 

Share this Video
  • FB
  • Linkdin
  • Whatsapp

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಬಸ್‌ ಹತ್ತುವಾಗ ಧಾರವಾಡದಲ್ಲಿ ಅಜ್ಜಿಯೊಬ್ಬರು ಬಸ್‌ಗೆ ಶಿರಬಾಗಿ ನಮಸ್ಕರಿಸಿದ್ದಾರೆ. ಈ ಫೋಟೋವನ್ನು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. ಟ್ವೀಟ್‌ನಲ್ಲಿ ಅವರು ಹೀಗೆ ಬರೆದಿದ್ದಾರೆ. ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್‌ಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಮಾಡಿದರು. ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ. ಯೋಜನೆ ಜಾರಿಗೆ ಕೊಟ್ಟ ಸಂತೃಪ್ತಿ ನನಗೆ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವಂತ ಫೋಟೋ ಇದು ಎಂದು ಟ್ವೀಟ್ ಮಾಡಿದ್ದಾರೆ.

Add Asianetnews Kannada as a Preferred SourcegooglePreferred

ಇದನ್ನೂ ವೀಕ್ಷಿಸಿ: ಬೈಕ್‌ ಸವಾರನ ಮೇಲೆ ದಾಳಿಗೆ ಮುಂದಾದ ಕರಡಿ: ಸ್ವಲ್ಪದರಲ್ಲೇ ಬಚಾವ್‌... ಅಬ್ಬಾ..! ಭಯಾನಕ ವಿಡಿಯೋ

Related Video