Asianet Suvarna News Asianet Suvarna News

ಕೋಲಾರದಲ್ಲಿ ಸಿದ್ದರಾಮಯ್ಯ ಸೋಲಿಸಲು ರಣತಂತ್ರ: ದಲಿತ ಮತದಾರರ ಕರಪತ್ರ ಅಭಿಯಾನ

ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಿರುವ ಹಿನ್ನಲೆಯಲ್ಲಿ ದಲಿತ ಮತದಾರರ ವಿಭಿನ್ನ ಕರಪತ್ರ ಜಾಗೃತಿ ಅಭಿಯಾನ ಶುರುವಾಗಿದೆ. ಈ ಕರಪತ್ರದಲ್ಲಿ ದಲಿತ ನಾಯಕರನ್ನ ಸೋಲಿಸಿದ ಸಿದ್ದರಾಮಯ್ಯ ಅವರನ್ನ ಸೋಲಿಸಿ ಎಂಬ ಕರಪತ್ರಗಳ ಹಂಚಿಕೆ ಮಾಡಲಾಗುತ್ತಿದೆ.

ಕೋಲಾರ (ಜ.21): ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಿರುವ ಹಿನ್ನಲೆಯಲ್ಲಿ ದಲಿತ ಮತದಾರರ ವಿಭಿನ್ನ ಕರಪತ್ರ ಜಾಗೃತಿ ಅಭಿಯಾನವೊಂದು ಶುರುವಾಗಿದೆ. ಈ ಕರಪತ್ರದಲ್ಲಿ ದಲಿತ ನಾಯಕರನ್ನ ಸೋಲಿಸಿದ ಸಿದ್ದರಾಮಯ್ಯ ಅವರನ್ನ ಸೋಲಿಸಿ ಎಂಬ ಕರಪತ್ರಗಳ ಹಂಚಿಕೆ ಮಾಡಲಾಗುತ್ತಿದೆ. 

ಹೌದು, ವಿಪಕ್ಷ ನಾಯ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧೆ ಮಾಡುವ ಬಗ್ಗೆ ಖಚಿತ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಮೋದಿ, ಅಮಿತ್ ಶಾ ಯಾರೇ ಬಂದರೂ ಕೋಲಾದಲ್ಲಿ ನನ್ನನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಸಿದ್ಧರಾಮಯ್ಯ ಹೇಳಿಕೊಂಡಿದ್ದಾರೆ. ಆದರೆ, ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಅಭಿಯಾನ ಶುರುವಾಗಿದೆ. ಸಿದ್ದರಾಮಯ್ಯ ಅವರನ್ನ ಸೋಲಿಸಿ ದಲಿತ ವ್ಯಕ್ತಿಯೊಬ್ಬರು ಮುಖ್ಯಮಂತ್ರಿ‌ ಆಗುವ ಹಾದಿಯನ್ನು ಸುಗಮಗೊಳಿಸಿ ಎಂದು ಕರಪತ್ರದಲ್ಲಿದೆ. 

ಮೋದಿ, ಶಾ ಯಾರೇ ಬರಲಿ, ಕೋಲಾರದಲ್ಲಿ ಗೆಲವು ನನ್ನದೇ: ಸಿದ್ದರಾಮಯ್ಯ ಗುಟುರು

ಸಿದ್ದರಾಮಯ್ಯ ಅವರನ್ನ ಸೋಲಿಸುವ ಮೂಲಕ ಕೋಲಾರ ದಲಿತರಿ ಸ್ವಾಭಿಮಾನ ಮೆರೆಯೋಣ ಎಂಬ ಸ್ಲೋಗನ್ಸ್ ಇದೆ. ಸಿದ್ದರಾಮಯ್ಯ ವಿರುದ್ಧ ಕೋಲಾರದಲ್ಲಿ ಹಂಚಿಕೆಯಾಗುತ್ತಿರುವ ಕರಪತ್ರಗಳು. ಪರಮೇಶ್ವರ್, ಮಲ್ಲಿಕಾರ್ಜುನ್‌ ಖರ್ಗೆ, ಶ್ರೀನಿವಾಸ ಪ್ರಸಾದ್, ಕೆ.ಎಚ್ ಮುನಿಯಪ್ಪರಂತ ದಲಿತ ನಾಯಕರನ್ನು ಸಿದ್ದರಾಮಯ್ಯ ಸೋಲಿಸಿದ್ದಾರೆ. ನಾವು ಈ ಬಾರಿ ಜಾಗೃತರರಾಗಬೇಕು ಎಂದು ಕರಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.

Video Top Stories