ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ಬಂದ ಯಡಿಯೂರಪ್ಪ ಜನಪ್ರಿಯ ನಾಯಕನಾದ ಕತೆ!

ಮಂಡ್ಯದ ಬೂಕನೆಕೆರೆಯಲ್ಲಿ ನಿಂಬೆ ಹಣ್ಣು ಮಾರಾಟ ಮಾಡಿಕೊಂಡಿದ್ದ ಬಿ.ಎಸ್.ಯಡಿಯೂರಪ್ಪ, ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ಬಂದು ಹೋರಾಟದ ಹಾದಿ ಮೂಲಕ ರಾಜ್ಯದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ.25): ಮಂಡ್ಯದ ಬೂಕನೆಕೆರೆಯಲ್ಲಿ ನಿಂಬೆ ಹಣ್ಣು ಮಾರಾಟ ಮಾಡಿಕೊಂಡಿದ್ದ ಬಿ.ಎಸ್.ಯಡಿಯೂರಪ್ಪ, ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ಬಂದು ಹೋರಾಟದ ಹಾದಿ ಮೂಲಕ ರಾಜ್ಯದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಬುಧವಾರ ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಆಡಿರುವ ಮಾತುಗಳನ್ನು ಪ್ರಧಾನಿ ನರೇಂದ್ರ ಮೋದಿ ಮುಕ್ತಕಂಠದಿಂದ ಪ್ರಶಂಸಿಸಿದ್ದಾರೆ. ‘ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇಂದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುತ್ತದೆ’ ಎಂದು ಮೋದಿ ಅವರು ಟ್ವೀಟ್‌ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಸಂಬಂಧ ಯಡಿಯೂರಪ್ಪ ಅವರ ಸುಮಾರು 21 ನಿಮಿಷಗಳ ಕಾಲದ ಭಾಷಣದ ವಿಡಿಯೋವನ್ನು ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿತ್ತು. ಇದನ್ನು ಮೋದಿ ಅವರು ತಮ್ಮ ಟ್ವೀಟ್‌ ಜತೆ ಟ್ಯಾಗ್‌ ಮಾಡಿದ್ದಾರೆ. ನನ್ನನ್ನು ಬಿಜೆಪಿ ಮೂಲೆಗುಂಪು ಮಾಡಿಲ್ಲ. ಯಾರಿಗೂ ಕೊಡದಷ್ಟುಅವಕಾಶ, ಸ್ಥಾನಮಾನವನ್ನು ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದಾರೆ. ನಾನು ಸದಾ ಮೋದಿಗೆ ಋುಣಿಯಾಗಿರುತ್ತೇನೆ. ನನ್ನ ಕೊನೆಯ ಉಸಿರು ಇರುವವರೆಗೂ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಯಡಿಯೂರಪ್ಪ ಅವರು ಬುಧವಾರ ವಿಧಾನಸಭೆಯಲ್ಲಿ ಬಜೆಟ್‌ ಮೇಲಿನ ಚರ್ಚೆ ವೇಳೆ ಹೇಳಿದ್ದರು.

Related Video