'ಪುರೋಹಿತರ' ರಹಸ್ಯ: ಬೊಮ್ಮಾಯಿಗೆ ಸಿಎಂ ಪಟ್ಟದ ಸುಳಿವು ಕೊಟ್ಟಿದ್ದ ಅರುಣ್ ಸಿಂಗ್!

ನಿಮಗೆ ಒಳ್ಳೆಯ ಪುರೋಹಿತರು ಗೊತ್ತಿದ್ದಾರೆಯೇ ಎಂದು ರಾಜ್ಯ ಬಿಜೆಪಿ ಉಸ್ತುವಾರಿ  ಅರುಣ್ ಸಿಂಗ್ ಅವರು ಬಸವರಾಜ ಬೊಮ್ಮಾಯಿ ಅವರನ್ನು ಕೇಳಿದಾಗಲೇ ಅವರಿಗೆ ತಾವು ಮುಖ್ಯಮಂತ್ರಿಯಾಗುತ್ತಿದ್ದೇನೆ ಎಂಬ ಮಾಹಿತಿ ಖಚಿತವಾಗಿತ್ತು. 

Share this Video
  • FB
  • Linkdin
  • Whatsapp

ಬೆಂಗಳೂರು(ಜು.29): ನಿಮಗೆ ಒಳ್ಳೆಯ ಪುರೋಹಿತರು ಗೊತ್ತಿದ್ದಾರೆಯೇ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಬಸವರಾಜ ಬೊಮ್ಮಾಯಿ ಅವರನ್ನು ಕೇಳಿದಾಗಲೇ ಅವರಿಗೆ ತಾವು ಮುಖ್ಯಮಂತ್ರಿಯಾಗುತ್ತಿದ್ದೇನೆ ಎಂಬ ಮಾಹಿತಿ ಖಚಿತವಾಗಿತ್ತು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಂಗಳವಾರ ಮಧ್ಯಾಹ್ನ ವೀಕ್ಷಕರಾಗಿ ಬೆಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕುಮಾರ ಕೃಪ ಅತಿಥಿಗೃಹದಲ್ಲಿ ಕುಳಿತು ದೆಹಲಿಯಿಂದ ಹೈ ಕಮಾಂಡ್ ಸಂದೇಶಕ್ಕಾಗಿ ಕಾಯುತ್ತಿದ್ದರು. ಅಂತಿಮವಾಗಿ ಯಾರು ಮುಖ್ಯಮಂತ್ರಿಯಾಗಬಹುದು ಎಂಬುದರ ಬಗ್ಗೆ ಅವರಿಗೂ ಅಧಿಕೃತ ಮಾಹಿತಿ ಇರಲಿಲ್ಲ. 

ಸಂಜೆ ಶಾಸಕಾಂಗ ಸಭೆಗೂ ಕೆಲ ಗೊತ್ತು ಮುಂಚೆ ಧರ್ಮೇಂದ್ರ ಪ್ರಧಾನ್ ಅವರಿಗೆ ಹೈ ಕಮಾಂಡ್‌ನಿಂದ ಬೊಮ್ಮಾಯಿ ಅವರೇ ಮುಂದಿನ ಸಿಎಂ ಎಂಬ ಸಂದೇಶ ಬಂತು ಬಳಿಕ ಅರುಣ್ ಸಿಂಗ್ ಅವರು ಸಭೆ ಆರಂಭವಾಗುವ ಮೊದಲು ಬೊಮ್ಮಾಯಿ ಅವರ ಬಳಿ ಬಂದು ನಿಮಗೆ ಒಳ್ಳೆಯ ಪುರೋಹಿತರು ಗೊತ್ತಿದ್ದಾರೆಯೇ ಎಂದು ನಗುತ್ತ ಪ್ರಶ್ನಿಸಿದ್ದರು. ಇದರಿಂದ ಗೊಂದಲಕ್ಕೆ ಈಡಾದ ಬೊಮ್ಮಾಯಿ ಅಚ್ಚರಿಯಿಂದ ಸಿಂಗ್ ನೋಡಿದರು. ಆಗ ನೀವು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಬೇಕಲ್ಲ ಅದಕ್ಕೆ ಎಂದರು.

Related Video