
ನಮ್ಮ ಎಲ್ಲಾ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುತ್ತೇವೆ: ಡಿ.ಕೆ.ಶಿವಕುಮಾರ್
ಮೊದಲನೇ ಕ್ಯಾಬಿನೇಟ್ನಲ್ಲೇ ನಮ್ಮ ಎಲ್ಲ ಗ್ಯಾರಂಟಿಗಳನ್ನ ಅನುಷ್ಠಾನಕ್ಕೆ ತರುತ್ತೇವೆ. ಕೊಟ್ಟ ಮಾತನ್ನ ನಾವು ಉಳಿಸಿಕೊಳ್ಳುತ್ತೇವೆ. ನಾಳಿನ ಐತಿಹಾಸಿಕ ಕಾರ್ಯಕ್ರಮಕ್ಕೆ ನೀವೆಲ್ಲರೂ ಸಾಕ್ಷಿಯಾಗಬೇಕು: ಡಿ.ಕೆ.ಶಿವಕುಮಾರ್
ಬೆಂಗಳೂರು(ಮೇ.19): ಕರ್ನಾಟಕ ರಾಜ್ಯದ ಎಲ್ಲ ಕಾರ್ಯಕರ್ತರಿಗೆ, ಮುಖಂಡರಿಗೆ, ನಮಗೆ ಬೆಂಬಲ ನೀಡಿದವರಿಗೆ ಹಾಗೂ ಮತದಾರರಿಗೆ ಧನ್ಯವಾದಗಳು ಅಂತ ನಿಯೋಜಿತ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮೊದಲನೇ ಕ್ಯಾಬಿನೇಟ್ನಲ್ಲೇ ನಮ್ಮ ಎಲ್ಲ ಗ್ಯಾರಂಟಿಗಳನ್ನ ಅನುಷ್ಠಾನಕ್ಕೆ ತರುತ್ತೇವೆ. ಕೊಟ್ಟ ಮಾತನ್ನ ನಾವು ಉಳಿಸಿಕೊಳ್ಳುತ್ತೇವೆ. ನಾಳಿನ ಐತಿಹಾಸಿಕ ಕಾರ್ಯಕ್ರಮಕ್ಕೆ ನೀವೆಲ್ಲರೂ ಸಾಕ್ಷಿಯಾಗಬೇಕು. ಪದಗ್ರಹಣ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರನ್ನ ಆಹ್ವಾನಿಸಿದ್ದೇವೆ. ನೀವೆ ತಮ್ಮ ತಮ್ಮ ವಾಹನ ಮಾಡಿಕೊಂಡು ಕಾರ್ಯಕ್ರಮಕ್ಕೆ ಬರಬೇಕು ಅಂತ ಕಾರ್ಯಕರ್ತರಲ್ಲಿ ಡಿಕೆಶಿ ಮನವಿ ಮಾಡಿಕೊಂಡಿದ್ದಾರೆ.
Add Asianetnews Kannada as a Preferred Source

ಸಚಿವ ಸಂಪುಟ ರಚನೆಯಲ್ಲೂ ಪೈಪೋಟಿ: ಸಿದ್ದು ಬಣದ ಎಷ್ಟು ನಾಯಕರಿಗೆ ಸಿಗಲಿದೆ ಸಚಿವ ಸ್ಥಾನ ?