‘ಅನರ್ಹ ಎಂಬ ಕಳಂಕ ಹೊತ್ಕೊಂಡು ಹೋದ್ರೆ ಜನ ಸಹಿಸ್ತಾರಾ?’
ಸುಪ್ರೀಂ ಕೋರ್ಟ್ ತೀರ್ಪಿನ ಬೆನ್ನಲ್ಲೇ ಉಪಚುನಾವಣೆ ಕಾವು ಜೋರಾಗಿದೆ. ಕಾಂಗ್ರೆಸ್, ಜೆಡಿಎಸ್ಗೆ ರಾಜೀನಾಮೆ ಕೊಟ್ಟು ಅನರ್ಹರಾದ 15 ಶಾಸಕರು ಬಿಜೆಪಿಗೆ ಸೇರಿದ್ದಾರೆ. ಈ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.
ಬೆಂಗಳೂರು (ನ.14): ಸುಪ್ರೀಂ ಕೋರ್ಟ್ ತೀರ್ಪಿನ ಬೆನ್ನಲ್ಲೇ ಉಪಚುನಾವಣೆ ಕಾವು ಜೋರಾಗಿದೆ. ಕಾಂಗ್ರೆಸ್, ಜೆಡಿಎಸ್ಗೆ ರಾಜೀನಾಮೆ ಕೊಟ್ಟು ಅನರ್ಹರಾದ 15 ಶಾಸಕರು ಬಿಜೆಪಿಗೆ ಸೇರಿದ್ದಾರೆ. ಈ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ...
ಶಾಸಕರ ರಾಜೀನಾಮೆಯಿಂದ ತೆರವಾಗಿರುವ 15 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.