
3ನೇ ಸ್ಥಾನದ ಫೈಟ್ನಲ್ಲಿ ಗೆಲುವು ಖಚಿತ ; ಗೆಲುವಿನ ಸೂತ್ರ ಬಿಚ್ಚಿಟ್ಟ ಲೆಹರ್ ಸಿಂಗ್
ಬಿಜೆಪಿ ಲೇಹನ್ ಸಿಂಗ್ ಅವರನ್ನ ಮೂರನೇ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಇದರಿಂದ ನಾಲ್ಕನೇ ಸ್ಥಾನಕ್ಕೆ ಮೂರು ಪಕ್ಷಗಳು ಪೈಪೋಟಿಗೆ ಬಿದ್ದಿದೆ. ಇನ್ನು ಮೂರನೇ ಸ್ಥಾನದ ಫೈಟ್ನಲ್ಲಿ ನಾನು ಗೆದ್ದೇ ಗೆಲ್ಲುವೆ ಎಂದು ಲೇಹರ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, (ಮೇ.31): ಕರ್ನಾಟಕ ರಾಜ್ಯಸಭೆ ಚುನಾವಣೆಯಲ್ಲಿ 4ನೇ ಸ್ಥಾನಕ್ಕಾಗಿ ಭರ್ಜರಿ ಕದನ ಶುರುವಾಗಿದ್ದು, ಯಾರು ಗೆಲ್ಲುತ್ತಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಬಿಜೆಪಿ ಎರಡು ಸ್ಥಾನ ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಅನಾಯಾಸವಾಗಿ ಪಡೆಯಲಿದೆ. ಆದ್ರೆ, ಬಿಜೆಪಿಗೆ ಸಂಖ್ಯಾಬಲ ಕೊರತೆ ಇದ್ರೂ ಸಹ ತನ್ನ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ರಾಜ್ಯಸಭಾ ಚುನಾವಣೆ: ಬಿಜೆಪಿ ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಕಣಕ್ಕೆ, ಕುತೂಹಲ
ಹೌದು...ಬಿಜೆಪಿ ಲೇಹನ್ ಸಿಂಗ್ ಅವರನ್ನ ಮೂರನೇ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಇದರಿಂದ ನಾಲ್ಕನೇ ಸ್ಥಾನಕ್ಕೆ ಮೂರು ಪಕ್ಷಗಳು ಪೈಪೋಟಿಗೆ ಬಿದ್ದಿದೆ. ಇನ್ನು ಮೂರನೇ ಸ್ಥಾನದ ಫೈಟ್ನಲ್ಲಿ ನಾನು ಗೆದ್ದೇ ಗೆಲ್ಲುವೆ ಎಂದು ಲೇಹರ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.