ಅಂಗನವಾಡಿ ಆಹಾರದಿಂದ ಬಿಜೆಪಿ ಬಿಟ್ಟಿ ಪ್ರಚಾರ, ಬೀದಿಗಿಳಿದ ಕಾಂಗ್ರೆಸ್ ಮಹಿಳೆಯರು..!
ಹೊಣೆ ಹೊತ್ತು ಸಚಿವರು ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತೆಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಬೆಂಗಳೂರು, (ಮೇ.03): ಅಂಗನವಾಡಿ ಆಹಾರವನ್ನು ಅಕ್ರಮವಾಗಿ ಸಾಗಿಸಿದ್ದಲ್ಲದೇ ತಮ್ಮ ಫೋಟೋ ಹಾಕಿಕೊಂಡು ಬಿಟ್ಟಿ ಪ್ರಚಾರ ಮಾಡುತ್ತಿರುವ ಬಿಜೆಪಿ ಮುಖಂಡರ ಮುಖವಾಡವನ್ನು ಕಾಂಗ್ರೆಸ್ ಬಯಲಿಗೆಳೆದಿದೆ.
ವಿರೋಧ ಪಕ್ಷ 'ಕೈ'ಗೆ ತಾನಾಗಿಯೇ ಪ್ರಬಲ ಅಸ್ತ್ರವನ್ನು ನೀಡಿದ ಸರ್ಕಾರ
ಇದನ್ನು ಹೊಣೆ ಹೊತ್ತು ಸಚಿವರು ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತೆಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.