
ಮರಿ ಆನೆಗೆ ಅಂಬಾರಿ ಹೊರಿಸೋಕೆ ಆಗಲ್ಲ: ಬಿಎಸ್ವೈ ವಿರುದ್ಧ ಮತ್ತೆ ಸಿಡಿದೆದ್ದ ಸೈನಿಕ!
ಸಚಿವ ಸಿ.ಪಿ.ಯೋಗೇಶ್ವರ್ ಅವರು ಮತ್ತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಸಿಡಿದೆದ್ದಿದ್ದಾರೆ.
ಮೈಸೂರು, (ಜುಲೈ.04): ಸಚಿವ ಸಿ.ಪಿ.ಯೋಗೇಶ್ವರ್ ಅವರು ಮತ್ತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಸಿಡಿದೆದ್ದಿದ್ದಾರೆ.
Add Asianetnews Kannada as a Preferred Source

'ಯಡಿಯೂರಪ್ಪನವರನ್ನ ಟಾರ್ಗೆಟ್ ಮಾಡಿದ್ರೆ ಸುಟ್ಟೋಗ್ತೀವಿ'
ಮೈಸೂರಿನಲ್ಲಿ ಇಂದು (ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಸೈನಿಕ, ಸಿಎಂ ಹುದ್ದೆ ಅನ್ನೋದು ಮೈಸೂರಿನ ದಸರಾ ಸಂದರ್ಭದಲ್ಲಿ ಅಂಬಾರಿ ಹೊರುವ ಆನೆ ಇದ್ದಂತೆ. ಅಲ್ಲಿ ತಾಯಿ ಚಾಮುಂಡಿ ಇರ್ತಾಳೆ, ಅದಕ್ಕೆ ಅದರದ್ದೇ ಆದ ಗೌರವ ಇರುತ್ತದೆ. ಅದಕ್ಕಾಗಿ ಸಿಎಂ ಆದವರು ಸಂವೇದನಾ ಶೀಲ, ಆಲೋಚನೆಯುಳ್ಳ ವ್ಯಕ್ತಿಯಾಗಿರಬೇಕು ಎಂದು ಪರೋಕ್ಷವಾಗಿ ಬಿಎಸ್ವೈ ವಿರುದ್ಧ ಕಿಡಿಕಾರಿದ್ದಾರೆ.