Puneeth Rajkumar ಅಗಲಿ ಇಂದಿಗೆ ಮೂರು ತಿಂಗಳು: ಕುಟುಂಬದಿಂದ ಸಮಾಧಿಗೆ ಪೂಜೆ

ಸ್ಯಾಂಡಲ್‌ವುಡ್‌ನ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ ನಿಧನರಾಗಿ ಇಂದಿಗೆ ಮೂರು ತಿಂಗಳುಗಳೇ ಕಳೆದು ಹೋಗಿದೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. 

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ನ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ (Puneeth Rajkumar)​ ನಿಧನರಾಗಿ ಇಂದಿಗೆ ಮೂರು ತಿಂಗಳುಗಳೇ ಕಳೆದು ಹೋಗಿದೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕಂಠೀರವ ಸ್ಟುಡಿಯೋ (Kanteerava Studio) ಆವರಣದಲ್ಲಿ ಇರುವ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಸಮಾಧಿ ಬಳಿ ಅಶ್ವಿನಿ ಪುನೀತ್​ ರಾಜ್​ಕುಮಾರ್,​ ಪುತ್ರಿ ಧೃತಿ, ರಾಘವೇಂದ್ರ ರಾಜ್ ಕುಮಾರ್ ಮತ್ತು ಅವರ ಪತ್ನಿ ಹಾಗೂ ವಿಜಯ್ ರಾಘವೇಂದ್ರ, ಧೀರೇನ್​ ರಾಮ್ ಕುಮಾರ್, ಪುನೀತ್ ಸಹೋದರಿ ಲಕ್ಷ್ಮೀ ಹಾಗೂ ಎಸ್.ಎ.ಗೋವಿಂದ್​ ರಾಜು ಸಮಾಧಿಗೆ ಪೂಜೆ ಪೂಜೆ ಮಾಡಿ ಅಪ್ಪುಗೆ ಎಡೆ ಇಟ್ಟಿದ್ದಾರೆ. 

Add Asianetnews Kannada as a Preferred SourcegooglePreferred

James ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್‌ ಪಾತ್ರಕ್ಕೆ ಯಾರೂ ಧ್ವನಿ ನೀಡುತ್ತಿಲ್ಲ!

ಬಳಿಕ ಅಪ್ಪು ನೆನಪಿಗಾಗಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಬಾದಾಮಿ, ಸೀಬೆ, ಮಾವು, ತೇಗ, ಹಲಸಿನ ಗಿಡ ಸೇರಿದಂತೆ 500 ಗಿಡಗಳನ್ನು ಅಭಿಮಾನಿಗಳಿಗೆ ದಾನವಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ರಾಘವೇಂದ್ರ ರಾಜ್‌ಕುಮಾರ್, ಅಪ್ಪು ಅಭಿಮಾನಿಗಳು ಭಕ್ತರಾಗುತ್ತಿದ್ದಾರೆ. ದಿನದಿಂದ ದಿನಕ್ಕೆ ಪುಣ್ಯಭೂಮಿಗೆ ಬರುತ್ತಿರುವ ಅಭಿಮಾನಿಗಳ ಸಂಖ್ಯೆ ಜಾಸ್ತಿ ಆಗುತ್ತಿದೆ. ಅಭಿಮಾನಿಗಳಿಗೆ ಗಿಡ ಕೊಟ್ಟು ಅವರಿಂದಲೇ ಆ ಸಸಿಗಳನ್ನು ನೆಡಲು ಯೋಚಿಸಿದ್ದೇವೆ. ಅಪ್ಪು ನಿಧನರಾಗುವ ಮುನ್ನ ಕಾಡಿನಲ್ಲಿ ಕೆಲಸ ಮಾಡಿದ್ದರು. ಕಾಡು, ಹಸಿರು ಅಂದರೆ ಅಪ್ಪುಗೆ ಬಹಳ ಇಷ್ಟ. ಹಾಗಾಗಿ ಗಿಡ ನೀಡುವ ಕೆಲಸ ಶುರು ಮಾಡಿದ್ದಿವಿ ಎಂದು ಹೇಳಿದರು. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video