ಅಪ್ಪುಗೆ ಕರ್ನಾಟಕ ರತ್ನ; ನನ್ನ ಕಣ್ಮುಂದೆ ಬೆಳೆದ ಹುಡುಗ, ಪುನೀತ್ ಬಗ್ಗೆ ಅರುಂಧತಿ ನಾಗ್ ಮಾತು

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟ ರತ್ನ ಪ್ರಶಸ್ತಿ ನೀಡುತ್ತಿರುವ ಬಗ್ಗೆ ಅರುಂಧತಿ ನಾಗ್ ಮಾತನಾಡಿದ್ದಾರೆ. 

Share this Video
  • FB
  • Linkdin
  • Whatsapp

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು (ನವೆಂಬರ್ 1) ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ವಿಧಾನಸೌಧದ ಮುಂಭಾಗದಲ್ಲಿ ನಡೆಯುವ ಸಮಾರಂಭದಲ್ಲಿ ಪವರ್ ಸ್ಟಾರ್ ಪರವಾಗಿ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಗೌರವ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಶಂಕರ್ ನಾಗ್ ಪತ್ನಿ ಅರುಂಧತಿ ನಾಗ್ ಮಾತನಾಡಿದ್ದಾರೆ. ಪುನೀತ್ ನನ್ನ ಕಣ್ಮುಂದೆ ಬೆಳೆದ ಹುಡುಗ. ಚಿಕ್ಕ ವಯಸ್ಸಿನಲ್ಲಿ ಅವರನ್ನು ಕಳೆದುಕೊಂಡಿದ್ದು ಸಹಿಸಲು ಕಷ್ಟವಾಗುತ್ತದೆ. ಪುನೀತ್, ಶಂಕರ್ ಸೇರಿದಂತೆ ಅನೇಕರನ್ನು ಚಿಕ್ಕ ವಯಸ್ಸಿನಲ್ಲೇ ಕಳೆದುಕೊಂಡೆವು, ಇದು ಶಾಪ ಎಂದು ಹೇಳಿದರು. ಅವರಿಗೆ ಕರ್ನಾಟಕ ರತ್ನ ನೀಡುತ್ತಿರುವುದು ತುಂಬಾ ಸಂತೋಷವಾಗುತ್ತಿದೆ ಎಂದು ಹೇಳಿದರು.

Related Video