Asianet Suvarna News Asianet Suvarna News

Darshan: ನಟ ದರ್ಶನ್‌ಗೆ ಡಬಲ್ ಶಾಕ್..! ಇನ್ನೂ 14 ದಿನ ನ್ಯಾಯಾಂಗ ಬಂಧನದಲ್ಲಿ, ಮತ್ತೆ ಮುಂದುವರೆದ ಜೈಲೂಟ!

ಕನ್ನಡ ನಟ ದರ್ಶನ್ ಬಹುಷಃ ತಮ್ಮ ಜಿವನದಲ್ಲಿ ಮತ್ತೆ ಜೈಲು ಮೆಟ್ಟಿಲು ಹತ್ತೊ ಕನಸನ್ನೂ ಕಂಡಿರಲಿಲ್ಲ ಅನ್ನಿಸುತ್ತೆ. ಆದ್ರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್‌ಗೆ ಸದ್ಯಕ್ಕಂತೂ ಜಾಮೀನು ಸಿಗುವ ಲಕ್ಷಣ ಕಾಣಿಸುತ್ತಿಲ್ಲ.

First Published Jul 19, 2024, 9:38 AM IST | Last Updated Jul 19, 2024, 10:03 AM IST

ಜುಲೈ 18 ಅವರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy murder case) ಆರೋಪಿಗಳ ನ್ಯಾಯಾಂಗ ಬಂಧನದ(Judicial custody) ಅವಧಿ ಮುಕ್ತಾಯವಾದ ಹಿನ್ನೆಲೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್(Darshn), ಪವಿತ್ರಾ ಗೌಡ (Pavithra Gowda)ಹಾಗೂ ಇನ್ನುಳಿದ ಆರೋಪಿಗಳು ಹಾಜರಾಗಿದ್ದರು. ಎಲ್ಲರಿಗೂ ಆಗಸ್ಟ್ 1ರ ತನಕ ನ್ಯಾಯಾಂಗ ಬಂಧನ ಮುಂದುವರಿಯಲಿದೆ. ಈ ಮೂಲಕ ದರ್ಶನ್ ಮತ್ತೆ ಹಿನ್ನೆಡೆಯಾಗಿದ್ದು ದರ್ಶನ್ಗೆ ದೊಡ್ಡ ನಿರಾಸೆ ಎದುರಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನನ್ನು  ಪವಿತ್ರಗೌಡಾಗೆ ಅಶ್ಲೀಲ ಮೆಸೇಜ್ ಕಳುಹಿಡಿದ ಎಂಬ ಕಾರಣಕ್ಕೆ ಬೆಂಗಳೂರಿಗೆ ಕರೆದುಕೊಂಡು ಬಂದು, ಕೊಲೆ ಮಾಡಿದ ಆರೋಪದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿ 17 ಜನರು ಜೈಲು ಪಾಲಾಗಿದ್ದಾರೆ. ಆದಷ್ಟು ಬೇಗ ಜಾಮೀನು ಪಡೆಯಬೇಕು ಎಂದು ದರ್ಶನ್ ಪ್ರಯತ್ನಿಸುತ್ತಿದ್ದಾರೆ. ಆದರೆ ಇದು ಕೊಲೆ ಪ್ರಕರಣ ಆದ್ದರಿಂದ ಅವರಿಗೆ ಜಾಮೀನು ಪಡೆಯುವುದು ಕಷ್ಟವಾಗಿದೆ. ಇನ್ನೂ 14 ದಿನಗಳ ಕಾಲ ಅವರು ಜೈಲಿನಲ್ಲಿ ಕಾಲ ಕಳೆಯುವುದು ಅನಿವಾರ್ಯ ಆಗಿದೆ. ದರ್ಶನ್‌ಗೆ ಮತ್ತೆ ಜೈಲೂಟವೇ ಫಿಕ್ಸಾಗಿದೆ. ಇದು ಅವರ ಅಭಿಮಾನಿಗಳಿಗೂ ನುಂಗಲಾರದ ತುತ್ತಾಗಿದೆ. ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಗೂ ಮುನ್ನವೇ ಹೈಕೋರ್ಟ್‌ನಲ್ಲಿ ದರ್ಶನ್ ಅವರಿಗೆ ನಿರಾಸೆಯಾಗಿದೆ. 

ಇದನ್ನೂ ವೀಕ್ಷಿಸಿ:  ಜೈಲಿಗೆ ಹೋಗುತ್ತಿದ್ದಂತೆ ದರ್ಶನ್‌ಗೆ ಆರೋಗ್ಯ ಕೆಟ್ಟಿದ್ದೇಕೆ..? ನಟನ ಬೇಡಿಕೆ ಒಪ್ಪದಂತೆ ಪೊಲೀಸ್ ಕೊಟ್ಟ ಕಾರಣವೇನು..?