Puneeth Rajkumar: ಅಪ್ಪು ಆಸೆಯಂತೆ ಮ್ಯೂಸಿಯಂ ಆಗಲಿದೆ ಗಾಜನೂರು ಮನೆ
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರನ್ನು ಕಳೆದುಕೊಂಡಿರುವುದು ಕನ್ನಡ ಚಿತ್ರರಂಗಕ್ಕೆ ಆದ ದೊಡ್ಡ ನಷ್ಟ. ಅಪ್ಪು ನಿಧನರಾಗುವುದಕ್ಕೂ ಮುನ್ನ ಅನೇಕ ಕನಸುಗಳನ್ನು ಕಂಡಿದ್ದರು. ಆದರೆ ಅವು ನನಸಾಗುವುದಕ್ಕೂ ಮುನ್ನವೇ ಅವರು ಇಹಲೋಕ ತ್ಯಜಿಸಿದ್ದು ನೋವಿನ ಸಂಗತಿ. ಅಪ್ಪು ಕಂಡಿದ್ದ ಅನೇಕ ಕನಸುಗಳನ್ನು ಅವರ ಕುಟುಂಬದವರು ಈಗ ನನಸು ಮಾಡುತ್ತಿದ್ದಾರೆ.
ಸ್ಯಾಂಡಲ್ವುಡ್ನ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ (Puneeth Rajkumar) ಅವರನ್ನು ಕಳೆದುಕೊಂಡಿರುವುದು ಕನ್ನಡ ಚಿತ್ರರಂಗಕ್ಕೆ ಆದ ದೊಡ್ಡ ನಷ್ಟ. ಅಪ್ಪು ನಿಧನರಾಗುವುದಕ್ಕೂ ಮುನ್ನ ಅನೇಕ ಕನಸುಗಳನ್ನು ಕಂಡಿದ್ದರು. ಆದರೆ ಅವು ನನಸಾಗುವುದಕ್ಕೂ ಮುನ್ನವೇ ಅವರು ಇಹಲೋಕ ತ್ಯಜಿಸಿದ್ದು ನೋವಿನ ಸಂಗತಿ. ಅಪ್ಪು ಕಂಡಿದ್ದ ಅನೇಕ ಕನಸುಗಳನ್ನು ಅವರ ಕುಟುಂಬದವರು ಈಗ ನನಸು ಮಾಡುತ್ತಿದ್ದಾರೆ. ಇತ್ತೀಚೆಗೆ 'ಗಂಧದ ಗುಡಿ' ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಬಿಡುಗಡೆ ಮಾಡಲಾಗಿತ್ತು. ಅದೇ ರೀತಿ ಈಗ ಇನ್ನೊಂದು ಕನಸನ್ನು ಡಾ. ರಾಜ್ಕುಮಾರ್ (Dr Rajkumar) ಕುಟುಂಬ ಕೈಗೆತ್ತಿಕೊಳ್ಳುತ್ತಿದೆ.
ಪುನೀತ್ ರಾಜ್ಕುಮಾರ್ ನೆನಪನ್ನು ಮೆಲುಕು ಹಾಕಿದ ಸಿದ್ದರಾಮಯ್ಯ
ಹೌದು! ಗಾಜನೂರಿನಲ್ಲಿ (Gajanuru) ಅಣ್ಣಾವ್ರು ಆಡಿ ಬೆಳೆದ ಮನೆಯನ್ನು ದುರಸ್ತಿ ಮಾಡಿಸಿ, ಅದನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ಕುಟುಂಬದವರು ತೀರ್ಮಾನಿಸಿದ್ದಾರೆ. ಆ ಜಾಗ ಎಂದರೆ ಪುನೀತ್ ರಾಜ್ಕುಮಾರ್ ಅವರಿಗೆ ಅಚ್ಚುಮೆಚ್ಚು ಆಗಿತ್ತು. ಅಲ್ಲಿಗೆ ಅವರು ಆಗಾಗ ಭೇಟಿ ನೀಡುತ್ತಿದ್ದರು. ಕಳೆದ ಮೂರುವರೆ ತಿಂಗಳ ಹಿಂದೆ ಗಾಜನೂರಿನ ಹಳೆ ಮನೆಗೆ ಪುನೀತ್ ಭೇಟಿ ನೀಡಿದ್ದರು. ಹಾಗೂ ಅಪ್ಪಾಜಿಯವರ ಹಳೇ ಮನೆಯನ್ನು ದುರಸ್ತಿ ಮಾಡಿಸುವುದಾಗಿ ಅಪ್ಪು ಅವರು ಹೇಳಿದ್ದರು. ಆದರೆ ಆ ಕಾರ್ಯ ನೆರವೇರುವುದಕ್ಕೂ ಮುನ್ನವೇ ಅವರು ಇಹಲೋಕ ತ್ಯಜಿಸಿದರು. ಅಪ್ಪು ಅಂದುಕೊಂಡ ಕೆಲಸವನ್ನು ಈಗ ಅವರ ಕುಟುಂಬದವರು ನನಸು ಮಾಡುತ್ತಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment