
ಗೀತಾ ಪಿಕ್ಚರ್ಸ್ ನಿರ್ಮಾಣದ 4ನೇ ಸಿನಿಮಾ ಘೋಷಣೆ; ಹೀರೋ ಯಾರು?
ಈ ವರ್ಷದ ಬ್ಲಾಕ್ ಬಸ್ಟರ್ 'ಭೈರತಿ ರಣಗಲ್' ಯಶಸ್ಸಿನ ನಂತರ, ಗೀತಾ ಪಿಕ್ಚರ್ಸ್ ಮತ್ತೊಂದು ಹ್ಯಾಟ್ರಿಕ್ ಘೋಷಣೆಗೆ ಸಿದ್ಧವಾಗಿದೆ. ಡಾ. ಪಾರ್ವತಮ್ಮ ರಾಜಕುಮಾರ್ ಅವರ ಹುಟ್ಟುಹಬ್ಬ ಹಿನ್ನೆಲೆ ತಮ್ಮ 4ನೇ ಚಿತ್ರವನ್ನು ಅನೌನ್ಸ್ ಮಾಡಿದೆ.
ಈ ವರ್ಷದ ಬ್ಲಾಕ್ ಬಸ್ಟರ್ 'ಭೈರತಿ ರಣಗಲ್' ಯಶಸ್ಸಿನ ನಂತರ, ಗೀತಾ ಪಿಕ್ಚರ್ಸ್ ಮತ್ತೊಂದು ಹ್ಯಾಟ್ರಿಕ್ ಘೋಷಣೆಗೆ ಸಿದ್ಧವಾಗಿದೆ. ನವೆಂಬರ್ 14ರಂದು A For Anand, ಡಾ. ಶಿವರಾಜ್ಕುಮಾರ್ ಅವರ ಹೊಸ ಚಿತ್ರವನ್ನು ಘೋಷಿಸಿದ ಈ ಬ್ಯಾನರ್, ಡಾ. ಪಾರ್ವತಮ್ಮ ರಾಜಕುಮಾರ್ ಅವರ ಹುಟ್ಟುಹಬ್ಬ ಹಿನ್ನೆಲೆ ತಮ್ಮ 4ನೇ ಚಿತ್ರವನ್ನು ಅನೌನ್ಸ್ ಮಾಡಿದೆ. ಈ ಸಿನಿಮಾದಲ್ಲಿ ದೊಡ್ಮನೆ ಕುಡಿ ಧೀರೆನ್ ರಾಮ್ ಕುಮಾರ್ ನಾಯಕನಾಗಿ ನಟಿಸುತ್ತಿದ್ದಾರೆ,. ಶಾಖಾಹಾರಿ ಚಿತ್ರದ ಡೈರೆಕ್ಟರ್ ಸಂದೀಪ್ ಸುಂಕದ ನಿರ್ದೇಶನ ಮಾಡುತ್ತಿದ್ದಾರೆ.
Add Asianetnews Kannada as a Preferred Source

ಅಂದಹಾಗೆ, ಸ್ಯಾಂಡಲ್ವುಡ್ ಖ್ಯಾತ ನಿರ್ಮಾಪಕಿಯಾಗಿ ಬೆಳೆದ ಪಾರ್ವತಮ್ಮ ರಾಜ್ಕುಮಾರ್ ಅವರು ಹುಟ್ಟಿದ್ದು ಸಾಲಿಗ್ರಾಮದಲ್ಲಿ, 06 ಡಿಸೆಂಬರ್ 1939 ರಂದು (6 December 1939, Saligrama).