
ಡಿ-ಬಾಸ್ ಬರ್ತಡೇ: ಮನವಿಗೆ ಕಿವಿಗೊಡ್ತಾರಾ ಅಭಿಮಾನಿಗಳು?
ಈ ವರ್ಷವೂ ಸರಳ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲು ಚಾಲೆಂಜಿಂಗ್ ಸ್ಟಾರ್ ನಿರ್ಧರಿಸಿದ್ದಾರೆ. ಜ. 16 ರಂದು ಹುಟ್ಟುಹಬ್ಬಕ್ಕೆ ಕೇಕ್, ಹೂವಿನಹಾರ ತರದಂತೆ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ.
ಬೆಂಗಳೂರು (ಜ. 19): ಈ ವರ್ಷವೂ ಸರಳ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲು ಚಾಲೆಂಜಿಂಗ್ ಸ್ಟಾರ್ ನಿರ್ಧರಿಸಿದ್ದಾರೆ. ಜ. 16 ರಂದು ಹುಟ್ಟುಹಬ್ಬಕ್ಕೆ ಕೇಕ್, ಹೂವಿನಹಾರ ತರದಂತೆ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ.
Add Asianetnews Kannada as a Preferred Source

ಹನುಮನಾಗಲು ಮಾಂಸಾಹಾರ ತ್ಯಜಿಸಿದ್ರು ಡಿ ಬಾಸ್ ದರ್ಶನ್!
ಕೇಕ್, ಹಾರದ ಹಣದಲ್ಲಿ ಕೈಲಾದಷ್ಟು ದವಸ ಧಾನ್ಯಗಳನ್ನು ತನ್ನಿ ಎಂದು ಮನವಿ ಮಾಡಿದ್ದಾರೆ. ಅಭಿಮಾನಿಗಳು ತಂದುಕೊಟ್ಟ ಅಕ್ಕಿ. ಬೇಳೆ . ಸಕ್ಕರೆಯನ್ನು ಅನಾಥಾಶ್ರಮಗಳಿಗೆ ರವಾನೆ ಮಾಡುವುದಾಗಿ ಹೇಳಿದ್ದಾರೆ. ಬರ್ತಡೇ ಸಂಭ್ರಮದಲ್ಲಿ ಅಕ್ಕ ಪಕ್ಕದ ಮನೆಯವರಿಗೆ ತೊಂದರೆ ಕೊಡಬೇಡಿ. ಪಟಾಕಿ ಹೊಡೆದು ಪರಿಸರ ಮಾಲಿನ್ಯ ಮಾಡಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.