ಅಭಿಷೇಕ್ ಅಂಬರೀಷ್‌ಗೆ ಜೋಡಿಯಾದ 'ಕಾಂತಾರ' ಲೀಲಾ

ಕಾಂತಾರ ಸಿನಿಮಾ ಮೂಲಕ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವ ನಟಿ ಸಪ್ತಮಿ ಗೌಡಗೆ ಅವಕಾಶಗಳ ಸುರಿಮಳೆಯೇ ಬರುತ್ತಿದೆ. ಸದ್ಯ ಸಪ್ತಮಿ ಯಂಗ್ ರೆಬಲ್ ಸ್ಟಾರ್ ಸಿನಿಮಾ ಆಯ್ಕೆ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. 

Share this Video
  • FB
  • Linkdin
  • Whatsapp

ಸಪ್ತಮಿ ಗೌಡ ಸಿನಿಮಾರಂಗ ಹೊಸ ಸೆನ್ಸೇಷನ್. ಸಿನಿಪ್ರಿಯರ ಬಾಯಲ್ಲೀಗ ಸಪ್ತಮಿ ಗೌಡ ಹೆಸರು ಕೇಳೋಕೆ ಸಿಗುತ್ತಿದೆ. ಇನ್ನೊಂದು ಕಡೆ ಈ ನಟಿಗೆ ಸ್ಯಾಂಡಲ್‌ವುಡ್‌ನಲ್ಲಿ ಬೇಡಿಕೆ ಕೂಡ ಹೆಚ್ಚಾಗಿತ್ತು. ಈ ಬೆನ್ನಲ್ಲೇ ಯಾವ ಸಿನಿಮಾವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಅನ್ನೋ ಕುತೂಹಲವಂತೂ ಇತ್ತು. ಅದಕ್ಕೀಗ ತೆರೆಬಿದ್ದಿದ್ದು. ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಹೊಸ ಸಿನಿಮಾದಲ್ಲಿ ನಟಿಸೋಕೆ ಸಪ್ತಮಿ ಗೌಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರಂತೆ.'ಕಾಂತಾರ' ಬಳಿಕ ಸಪ್ತಮಿ ಗೌಡ ಹೊಸ ಸಿನಿಮಾ 'ಕಾಳಿ'ಯಲ್ಲಿ ನಟಿಸುತ್ತಿದ್ದಾರೆ. 'ಪೈಲ್ವಾನ್' ಸಿನಿಮಾದ ನಿರ್ದೇಶಕ ಕೃಷ್ಣ ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಭಿಷೇಕ್ ಅಂಬರೀಶ್ ಲೀಡ್‌ ರೋಲ್‌ನಲ್ಲಿ ನಟಿಸುತ್ತಿದ್ದಾರೆ. ಇವರಿಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಅನ್ನೋ ಸುದ್ದಿ ಚಿತ್ರರಂಗದಲ್ಲಿ ಹರಿದಾಡುತ್ತಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video