Asianet Suvarna News Asianet Suvarna News

Naveen Shankar: 'ಧನಂಜಯ್ ಹಾಗೂ ನನ್ನ ಸ್ನೇಹ ತುಂಬಾ ವರ್ಷಗಳದ್ದು, ಅವರು ನೀಡುತ್ತಿರುವ ಸಹಕಾರ ಅಪಾರ'

ಧನಂಜಯ್ ಹಾಗೂ ನನ್ನ ಸ್ನೇಹ ತುಂಬಾ ವರ್ಷಗಳದ್ದು. ನನಗೆ ಅವರು ನೀಡುತ್ತಿರುವ ಸಹಕಾರ ಅಪಾರ. ಸುನಿ ಅವರು ಕೂಡ ನನ್ನ ಮೊದಲ ಕಿರುಚಿತ್ರದ ಪೋಸ್ಟರ್ ಬಿಡುಗಡೆ ಮಾಡಿಕೊಟ್ಟಿದ್ದರು ಎಂದು 'ಕ್ಷೇತ್ರಪತಿ'  ಚಿತ್ರದ ನಾಯಕ ನವೀನ್ ಶಂಕರ್ ಹೇಳಿದರು.

ಸ್ಯಾಂಡಲ್‌ವುಡ್‌ನಲ್ಲಿ 'ಗುಲ್ಟು' ಸಿನಿಮಾದಿಂದ ಜನಪ್ರಿಯತೆ ಪಡೆದುಕೊಂಡ ನವೀನ್ ಶಂಕರ್. ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ನವೀನ್ ಬ್ಯುಸಿ ಆಗಿದ್ದಾರೆ. ಇದೀಗ ಸದ್ದಿಲ್ಲದೇ ಅವರು ಮತ್ತೊಂದು ಸಿನಿಮಾವನ್ನು ಮುಗಿಸಿದ್ದಾರೆ. ಈ ಸಿನಿಮಾಕ್ಕೆ 'ಕ್ಷೇತ್ರಪತಿ' ಎಂದು ಹೆಸರಿಡಲಾಗಿದ್ದು, ಅದರ ಈಚೆಗೆ ಫಸ್ಟ್‌ಲುಕ್‌ ರಿಲೀಸ್ ಆಗಿದೆ. ಧನಂಜಯ್ ಹಾಗೂ ನನ್ನ ಸ್ನೇಹ ತುಂಬಾ ವರ್ಷಗಳದ್ದು. ನನಗೆ ಅವರು ನೀಡುತ್ತಿರುವ ಸಹಕಾರ ಅಪಾರ. ಸುನಿ ಅವರು ಕೂಡ ನನ್ನ ಮೊದಲ ಕಿರುಚಿತ್ರದ ಪೋಸ್ಟರ್ ಬಿಡುಗಡೆ ಮಾಡಿಕೊಟ್ಟಿದ್ದರು. ಜನಾರ್ದನ ಚಿಕ್ಕಣ್ಣ ಅವರ ಸಹಕಾರ ಕೂಡ ಮರೆಯುವ ಹಾಗಿಲ್ಲ. ಇವರೆಲ್ಲ  ಬಂದಿರುವುದು ತುಂಬಾ ಸಂತೋಷವಾಗಿದೆ. ಶ್ರೀಕಾಂತ್ ಅವರು ಈ ಚಿತ್ರದ ಕಥೆ ಹೇಳಿದಾಗ, ನಾನು ಮನಸ್ಸಿನಲ್ಲಿ ಈ ರೀತಿಯ ಚಿತ್ರ ಮಾಡಬೇಕೆಂದುಕೊಳ್ಳುತ್ತಿದ್ದೆ. ಇದು ಸಹ ಅದೇ ರೀತಿಯ ಕಥೆಯಾಗಿದ್ದು ಕಾಕತಾಳೀಯ.

Naveen Shankar: "ಕ್ಷೇತ್ರಪತಿ" ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭಕೋರಿದ ಡಾಲಿ!

ನಂತರ ನಿರ್ಮಾಪಕರ ಹುಡುಕಾಟ. ಆನಂತರ ನಾವೇ ಕೆಲವು ಸ್ನೇಹಿತರು ಸೇರಿ ಒಂದು ನಿರ್ಮಾಣ ಸಂಸ್ಥೆ ಪ್ರಾರಂಭ‌ ಮಾಡಿ ಚಿತ್ರೀಕರಣ ಆರಂಭಿಸಿದ್ದೆವು. ಸಾಕಷ್ಟು ಜನ  ಸ್ನೇಹಿತರು ನಿರ್ಮಾಣಕ್ಕೆ ಜೊತೆಯಾದರು. ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಕಥೆ ಕೇಳಿ ಸಂತೋಷಪಟ್ಟರು. ಸಂಗೀತ ನೀಡಲು ಒಪ್ಪಿದರು. ಇನ್ನೂ ಈ ಚಿತ್ರದ ಬಗ್ಗೆ ಹೇಳಬೇಕೆಂದರೆ ನಾನು  ಬಸವ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ಬಸವ ಇಂಜಿನಿಯರಿಂಗ್ ವಿದ್ಯಾರ್ಥಿ. ‌ತನ್ನಿಷ್ಟಕ್ಕೆ ತಾನು ಇರುವಾತ. ಆತನ ಜೀವನದಲ್ಲಿ ನಡೆಯುವ ಅನಿರೀಕ್ಷಿತ ಘಟನೆಯೊಂದರ ಮೂಲಕ ಈತ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ.‌ ಈ ಬಸವ ನನ್ನೊಳಗೆ, ನಿಮ್ಮೊಳಗೆ ಇದ್ದಾನೆ.‌ ಕೆಲವರಿಗೆ ಅವನು ಜೀವಂತ. ಇನ್ನೂ ಕೆಲವರಿಗೆ ಆತ‌ ಇಲ್ಲ. ಚಿತ್ರ ನೋಡಿದ ಮೇಲೆ ಅದರ ಬಗ್ಗೆ ತಿಳಿಯುತ್ತದೆ ಎಂದು ಕಥೆಯ ಬಗ್ಗೆ ವಿವರಿಸಿದ ನವೀನ್ ಶಂಕರ್, ಚಿತ್ರದ ಚಿತ್ರೀಕರಣ ಪೂರ್ಣವಾಗಿದೆ.‌ ನಂತರದ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿದೆ ಎಂದರು.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies