Asianet Suvarna News Asianet Suvarna News

ಆಂಧ್ರಪ್ರದೇಶದ ಆಸ್ಪತ್ರೆಗೆ 50 ಲಕ್ಷ ರೂ. ದೇಣಿಗೆ ನೀಡಿದ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್

ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಆಂಧ್ರ ಪ್ರದೇಶದ ನೀಲಕಂಠಪುರಂ ಹಳ್ಳಿಯ ಆಸ್ಪತ್ರೆಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಪ್ರಶಾಂತ್ ನೀಲ್ ಆಂಧ್ರಪ್ರದೇಶo ನೀಲಕಂಠಪುರಂಗೆ ಭೇಟಿ ನೀಡಿದ್ದ ವಿಡಿಯೋ ಸಾಮಾಜಿಕ ಜಾಲತಾದಲ್ಲಿ ವೈರಲ್ ಆಗಿದೆ. ಅಲ್ಲಿನ ದೇವಸ್ಥಾನಕ್ಕೆ ಹೋಗಿ ದೇವರ ಆಶೀರ್ವಾದ ಪಡೆದಿದ್ದಾರೆ. 

ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಆಂಧ್ರ ಪ್ರದೇಶದ ನೀಲಕಂಠಪುರಂ ಹಳ್ಳಿಯ ಆಸ್ಪತ್ರೆಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಪ್ರಶಾಂತ್ ನೀಲ್ ಆಂಧ್ರಪ್ರದೇಶo ನೀಲಕಂಠಪುರಂಗೆ ಭೇಟಿ ನೀಡಿದ್ದ ವಿಡಿಯೋ ಸಾಮಾಜಿಕ ಜಾಲತಾದಲ್ಲಿ ವೈರಲ್ ಆಗಿದೆ. ಅಲ್ಲಿನ ದೇವಸ್ಥಾನಕ್ಕೆ ಹೋಗಿ ದೇವರ ಆಶೀರ್ವಾದ ಪಡೆದಿದ್ದಾರೆ. ಅಂದಹಾಗೆ ನೀಲಕಂಠಪುರಂ ಪ್ರಶಾಂತ್ ನೀಲ್ ಅವರ ಅಜ್ಜಿಯ ಮನೆ. ತನ್ನ ಅಜ್ಜಿಯ ಊರಿಗೆ ಭೇಟಿ ನೀಡಿ ನೀಡಿದ ಪ್ರಶಾಂತ್ ಅಲ್ಲಿನ ಜನ ಜೊತೆ ಮಾತನಾಡಿದ್ದಾರೆ. ಆಂಧ್ರಪ್ರದೇಶದ ಕಣ್ಣಿನ ಆಸ್ಪತ್ರೆಗೆ 50 ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ತನ್ನ ಅಜ್ಜಿಯ ಊರಿನ ಬೆಂಬಲಕ್ಕೆ ನಿಂತಿದ್ದಾರೆ.  ಈ ಬಗ್ಗೆ ಪ್ರಶಾಂತ್ ನೀಲ್ ಮಾವ ಡಾ. ಎನ್ ರಘುವೀರ್ ರೆಡ್ಡಿ ಅವರು ಸಾಮಾಜಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ತನ್ನ ತಂದೆಯ 75ನೇ ವರ್ಷದ ಹುಟ್ಟುಹಬ್ಬದ ಸವಿನೆನಪಿಗೆ ಪ್ರಶಾಂತ್ ನೀಲ್ ಆಸ್ಪತ್ರೆಗೆ ದೇಣಿಗೆ ನೀಡುವ ಮೂಲಕ ಅರ್ಥಪೂರ್ಣವಾಗಿ ತಂದೆಯ ಹುಟ್ಟುಹಬ್ಬ ಆಚರಿಸಿದ್ದಾರೆ.