Asianet Suvarna News Asianet Suvarna News

ದೇವಸ್ಥಾನಕ್ಕೆ ದಿಢೀರ್ ಭೇಟಿ ನೀಡಿದ ರಜಿನಿಕಾಂತ್: 'ತಲೈವಾ’ ನಂಬುವ ಆ ಶಕ್ತಿ ಸ್ಥಳ ಯಾವುದು ?

ಮಗಳಿಗೆ ಒಳ್ಳೆಯದಾಗಬೇಕೆಂದು ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಇರುವ ಪ್ರಸಿದ್ಧ ಅಣ್ಣಾಮಲೈಯಾರ್ ದೇವಸ್ಥಾನಕ್ಕೆ ನಟ ರಜನಿಕಾಂತ್‌ ಭೇಟಿ ನೀಡಿದ್ದಾರೆ.

First Published Jul 4, 2023, 3:04 PM IST | Last Updated Jul 4, 2023, 3:04 PM IST

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಬ್ಯುಸಿ ಶೆಡೂಲ್ಡ್ನಲ್ಲೂ ಜೈಲರ್ ಸಿನಿಮಾದ ಶೂಟಿಂಗ್ನಲ್ಲಿ ಹಂತ ಹಂತವಾಗಿ ತೊಡಗಿಕೊಳ್ಳುತ್ತಿದ್ದಾರೆ. ಇದರ ನಡುವೆ ಮಗಳು ಐಶ್ವರ್ಯ ನಿರ್ದೇಶನದ ಲಾಲ್ ಸಲಾಮ್ ಸಿನಿಮಾದಲ್ಲಿ ರಜನಿಕಾಂತ್ ಗೆಸ್ಟ್ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಈ ಸಿನಿಮಾದ ಶೂಟಿಂಗ್ ವೇಳೆ ರಜನಿಕಾಂತ್ ಅವರು ಪ್ರಸಿದ್ಧ ದೇವಾಲಯಕ್ಕೆ ಭೇಟಿ ಕೊಟ್ಟು ದೇವರ ದರ್ಶನ ಪಡೆದುಕೊಂಡಿದ್ದಾರೆ. ಅಣ್ಣಾಮಲೈಯಾರ್ ದೇವರ ದರ್ಶನ ಪಡೆದು ಕುಟುಂಬ ಮತ್ತು ಮಕ್ಕಳಿಗೆ ಒಳ್ಳೆಯದನ್ನು ಮಾಡವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ. ಇನ್ನು ಲಾಲ್ ಸಲಾಮ್ ಸಿನಿಮಾದಲ್ಲಿ ರಜನಿಕಾಂತ್ ಗೆಸ್ಟ್ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೊಂದು ವಿಶೇಷ ಎಂದರೆ ಈ ಸಿನಿಮಾವನ್ನು ಸ್ವತಹ ರಜನಿಕಾಂತ್ ಅವರ ಹಿರಿಯ ಪುತ್ರಿ ಐಶ್ವರ್ಯ ಅವರು ನಿರ್ದೇಶನ ಮಾಡುತ್ತಿದ್ದಾರೆ. ಸುಬಾಸ್ಕರನ್ (ಲೈಕಾ ಪ್ರೊಡಕ್ಷನ್ಸ್) ಬಂಡವಾಳ ಹೂಡಿದ್ದು ಸಿನಿಮಾದ ಮುಖ್ಯ ಪಾತ್ರದಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಅಭಿನಯ ಮಾಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಕುಮಾರಸ್ವಾಮಿ ಅವರ ಹೋರಾಟಕ್ಕೆ ನಮ್ಮ ಬೆಂಬಲವಿದೆ: ಬಿಎಸ್‌ವೈ

Video Top Stories