Asianet Suvarna News Asianet Suvarna News

ಶಿವರಾಜ್‌ಕುಮಾರ್-ಪ್ರಭುದೇವ ಕಾಂಬಿನೇಷನ್ ಸಿನಿಮಾ ಬಗ್ಗೆ ರಾಕ್‌ಲೈನ್‌ ವೆಂಕಟೇಶ್ ಹೇಳಿದ್ದೇನು?

ಯೋಗರಾಜ್ ಭಟ್ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ಮತ್ತು ಪ್ರಭುದೇವ್ ನಟನೆಯ ಇನ್ನೂ ಹೆಸರಿಡದ ಸಿನಿಮಾದ ಮುಹೂರ್ತ ಬೆಂಗಳೂರಿನಲ್ಲಿ ನಡೆದಿದೆ. ರಾಕ್‌ಲೈನ್ ಸ್ಟುಡಿಯೋದಲ್ಲಿ ಸಿನಿಮಾಗೆ ಚಾಲನೆ ಸಿಕ್ಕಿದೆ. ಪ್ರೊಡಕ್ಷನ್ ನಂಬರ್ 47 ಹೆಸರಿನಲ್ಲಿ ಸದ್ಯಕ್ಕೆ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಸಿನಿಮಾ ಬಗ್ಗೆ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್ ಮಾತನಾಡಿದ್ದಾರೆ.

ಯೋಗರಾಜ್ ಭಟ್ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ಮತ್ತು ಪ್ರಭುದೇವ್ ನಟನೆಯ ಇನ್ನೂ ಹೆಸರಿಡದ ಸಿನಿಮಾದ ಮುಹೂರ್ತ ಬೆಂಗಳೂರಿನಲ್ಲಿ ನಡೆದಿದೆ. ರಾಕ್‌ಲೈನ್ ಸ್ಟುಡಿಯೋದಲ್ಲಿ ಸಿನಿಮಾಗೆ ಚಾಲನೆ ಸಿಕ್ಕಿದೆ. ಪ್ರೊಡಕ್ಷನ್ ನಂಬರ್ 47 ಹೆಸರಿನಲ್ಲಿ ಸದ್ಯಕ್ಕೆ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಸಿನಿಮಾ ಬಗ್ಗೆ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್ ಮಾತನಾಡಿದ್ದಾರೆ. 2-3 ವರ್ಷಗಳ ನಂತರ ಪ್ಯಾನ್ ಇಂಡಿಯಾ ಚಿತ್ರ ಮಾಡೋಕೆ ನನಗೆ ಅವಕಾಶ ಸಿಕ್ಕಿದೆ. ಅದರಲ್ಲೂ ಶಿವಣ್ಣ ಹಾಗೂ ಪ್ರಭುದೇವ ಅವರ ಕಾಂಬಿನೇಷನ್‌ನಲ್ಲಿ ಸಿನಿಮಾ ಮಾಡೋ ಅವಕಾಶ ನನಗೆ ಈ ಸಂದರ್ಭದಲ್ಲಿ ಒದಗಿ ಬಂದಿರುವುದು ಬಹಳ ಸಂತೋಷ ತಂದಿದೆ. ಯೋಗರಾಜ್ ಭಟ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರವನ್ನು ನಾನು ಚ್ಯಾಲೆಂಜ್‌ ಆಗಿ ತಗೊಂಡಿದ್ದೀನಿ ಎಂದು ರಾಕ್‌ಲೈನ್‌ ವೆಂಕಟೇಶ್ ಹೇಳಿದರು.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies