ವದಂತಿ ಸುಳ್ಳು, ವೆಂಟಿಲೇಟರ್ನಲ್ಲಿಯೇ ಚಿಕಿತ್ಸೆ ಮುಂದುವರಿಕೆ: ಎಸ್ಪಿಬಿ ಪುತ್ರ ಸ್ಪಷ್ಟನೆ
ಎಸ್.ಪಿ. ಬಾಲಸುಬ್ರಹ್ಮಣ್ಯಂ ವೆಂಟಿಲೇಟರ್ ನೆರವಿಲ್ಲದೆ ಉಸಿರಾಡುತ್ತಿದ್ದಾರೆ ಎಂಬ ವದಂತಿ ಸುಳ್ಳು ಎಂದು ಅವರ ಪುತ್ರ ಎಸ್. ಪಿ. ಚರಣ್ ಮಾಹಿತಿ ನೀಡಿದ್ದಾರೆ
ಎಸ್.ಪಿ. ಬಾಲಸುಬ್ರಹ್ಮಣ್ಯಂ ವೆಂಟಿಲೇಟರ್ ನೆರವಿಲ್ಲದೆ ಉಸಿರಾಡುತ್ತಿದ್ದಾರೆ ಎಂಬ ವದಂತಿ ಸುಳ್ಳು ಎಂದು ಅವರ ಪುತ್ರ ಎಸ್. ಪಿ. ಚರಣ್ ಮಾಹಿತಿ ನೀಡಿದ್ದಾರೆ. ಎಸ್. ಪಿ. ಬಾಲಸುಬ್ರಹ್ಮಣ್ಯಂಗೆ ಕೊರೋನಾ ಸೋಂಕು ಹಿನ್ನೆಲೆ ಆರೋಗ್ಯದ ಬಗ್ಗೆ ಪುತ್ರ ಮಾಹಿತಿ ನೀಡಿದ್ದಾರೆ.
ಗಾಯಕ ಎಸ್ಬಿಪಿ ಆರೋಗ್ಯದಲ್ಲಿ ಚೇತರಿಕೆ, ಪ್ಲಾಸ್ಮಾ ಚಿಕಿತ್ಸೆ!
ಎಸ್ಪಿಬಿ ಆರೋಗ್ಯದ ಕುರಿತು ಪುತ್ರ ಎಸ್.ಪಿ. ಚರಣ್ ಮಾಹಿತಿ ನೀಡಿದ್ದು, ಎಸ್ಪಿಬಿ ವೆಂಟಿಲೇಟರ್ನಿಂದ ಹೊರಗೆ ಬಂದಿದ್ದಾರೆ ಎನ್ನುವ ವದಂತಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಿನ್ನೆಯಂತೆ ಇವತ್ತು ಕೂಡ ಅವರ ಆರೋಗ್ಯ ಯಥಾಸ್ಥಿತಿಯಲ್ಲೇ ಇದೆ. ವೆಂಟಿಲೇಟರ್ ನಲ್ಲೇ ಇದ್ದಾರೆ. ಚಿಕಿತ್ಸೆ ಮುಂದುವರೆದಿದೆ. ತಜ್ಞ ವೈದ್ಯರ ತಂಡ ತಂದೆಯ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ ಎಂದಿದ್ದಾರೆ.